ಬೆಂಗಳೂರಿನ ಅಂತರಂಗ ಪ್ರತಿಷ್ಠಾನದ ಪ್ರೇರಣಾ ಮಾಸದ ಸರಣಿಯ ಅಂಗವಾಗಿ ಹಸಿರು ಹೆಜ್ಜೆ ಕಾರ್ಯಕ್ರಮ ತಾಲೂಕಿನ ತೇಲಂಗಾರ ಮೈತ್ರಿ ಸಭಾಭವನದಲ್ಲಿ ಸೆ.25 ರಂದು ಮಧ್ಯಾಹ್ನ 3.30 ಕ್ಕೆ ನಡೆಯಲಿದೆ.
ಮಕ್ಕಳಿಗಾಗಿ ಸಂಗೀತ ಕುರ್ಚಿ ಹಾಗೂ ಪ್ಲಾಸ್ಟಿಕ್ ಮುಕ್ತ ಭೂಮಿ ಕುರಿತು ಚಿತ್ರ ರಚನೆಯ ಸ್ಪರ್ಧೆ ಏರ್ಪಡಿಸಲಾಗಿದೆ. ಮೈತ್ರಿ ಕಲಾ ಬಳಗದ ಅಧ್ಯಕ್ಷ ಗಣಪತಿ ಕಂಚಿಪಾಲ ಉಪಸ್ಥಿತರಿರುವರು.
ಹೆಚ್ಚಿನ ಮಾಹಿತಿಗಾಗಿ 8073373514 ಗೆ ಸಂಪರ್ಕಿಸಬಹುದೆಂದು ಪ್ರತಿಷ್ಠಾನದ ಅಧ್ಯಕ್ಷೆ ಮಧುರಾ ಗಾಂವ್ಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







