ಸಿಲಿಂಡರ್ ಸ್ಫೋಟಗೊಂಡು ಯುವತಿ ಸಾವನ್ನಪ್ಪಿದ ಘಟನೆ ಶಿರಸಿ ತಾಲೂಕಿನ ಮರ್ಕಿಕೊಡ್ಲು ಗ್ರಾಮದಲ್ಲಿ ನಡೆದಿದೆ.
ರಂಜಿತಾ ನಾಗಪ್ಪ ದೇವಾಡಿಗ (21) ಮೃತ ಯುವತಿ. ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಪದವಿ ಓದುತ್ತಿದ್ದ ಯುವತಿ ಮಂಗಳವಾರ ಅನಾರೋಗ್ಯದ ಕಾರಣದಿಂದ ಕಾಲೇಜಿಗೆ ಹೋಗಿರಲಿಲ್ಲ. ತಂದೆ-ತಾಯಿಯೂ ಮನೆಯಲ್ಲಿ ಇರಲಿಲ್ಲ. ಈ ವೇಳೆ ದುರ್ಘಟನೆ ಸಂಭವಿಸಿ, ಯುವತಿ ಸಾವಿಗೀಡಾಗಿದ್ದಾಳೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.







