ಪ್ರವಾಸಕ್ಕೆ ಬಂದ ಇಂಜನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರುಪಾಲಾದ ಘಟನೆ ಯಲ್ಲಾಪುರ ತಾಲೂಕಿನ ಬಾಸಲ ಸಮೀಪದ ಕಾನೂರು ಜಲಪಾತದಲ್ಲಿ ನಡೆದಿದೆ.
ಧಾರವಾಡ ಮೂಲದ ಸೋಹಿಲ್ ಖಾನ್ ನೀರಿನಲ್ಲಿ ಬಿದ್ದು ಕಾಣೆಯಾದವನಾಗಿದ್ದಾನೆ. ಹಳಿಯಾಳದ ಇಂಜಿನಿಯರ್ ಕಾಲೇಜಿನ ಎಂಟು ವಿದ್ಯಾರ್ಥಿಗಳು ಮಂಗಳವಾರ ಕಾನೂರು ಜಲಪಾತ ವೀಕ್ಷಣೆಗೆ ಬಂದಿದ್ದರು.
ನೀರಿನಲ್ಲಿ ಆಟವಾಡಿ, ಮರಳಿ ಹೋಗುವ ಸಿದ್ಧತೆಯಲ್ಲಿ ತೊಡಗಿದಾಗ ಸೋಹಿಲ್ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದಿದ್ದಾನೆ.
ವಿಷಯ ತಿಳಿದ ಸ್ಥಳೀಯ ಗ್ರಾಮ ಅರಣ್ಯ ಸಮಿತಿಯವರು ಅರಣ್ಯ ಹಾಗೂ ಪೊಲೀಸ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ, ಆತನ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ.







