ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಘಟನೆ ಯಲ್ಲಾಪುರ ತಾಲೂಕಿನ ಆರತಿಬೈಲ್ ಬಳಿ ನಡೆದಿದೆ.
ಆರತಿಬೈಲಿನ ನಾಗರಾಜ ಬಾಬು ನಾಯ್ಕ ಇಡಗುಂದಿ ಕಡೆಗೆ ಹೋಗುವಾಗ ಏಕಾಏಕಿ ಮುನ್ಸೂಚನೆ ನೀಡದೇ ಬಲಕ್ಕೆ ಬೈಕ್ ತಿರುಗಿಸಿದ್ದಾರೆ. ಹಿಂದಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಬೈಕ್ ಡಿಕ್ಕಿಯಾಗಿದ್ದು, ಸವಾರ ನಾಗರಾಜ ಹಾಗೂ ಬೈಕ್ ನ ಹಿಂಬದಿಯಲ್ಲಿ ಕುಳಿತ ಇನ್ನೊಬ್ಬ ವ್ಯಕ್ತಿಯೂ ಗಾಯಗೊಂಡಿದ್ದಾರೆ.
ಎರಡೂ ವಾಹನಗಳು ಸ್ವಲ್ಪ ಪ್ರಮಾಣದಲ್ಲಿ ಜಖಂಗೊಂಡಿವೆ. ಬೈಕ್ ಸವಾರ ನಾಗರಾಜ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






