ಯಲ್ಲಾಪುರ ತಾಲೂಕಿನ ಉಪಳೇಶ್ವರದಲ್ಲಿ ಶಾರದಾ ಉತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯುತ್ತಿದೆ.
ಶಾರದಾ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದ್ದು, ನೂರಾರು ಜನ ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ.
ಉತ್ಸವದ ಪ್ರಯುಕ್ತ ಅಕ್ಟೋಬರ್ 1 ರಂದು ರಾತ್ರಿ 8.30 ಕ್ಕೆ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಕೃಷ್ಣಾರ್ಜುನ ಕಾಳಗ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ಕೆ.ಡಿ.ಹೆಗಡೆ ಕನಕನಹಳ್ಳಿ, ಮದ್ದಲೆವಾದಕರಾಗಿ ಕೃಷ್ಣ ಹೆಗಡೆ ಜೋಗದಮನೆ, ಚಂಡೆವಾದಕರಾಗಿ ನಯನಕುಮಾರ ನಿಟ್ಟೂರು ಭಾಗವಹಿಸಲಿದ್ದಾರೆ.
ಸುಬ್ರಹ್ಮಣ್ಯ ಚಿಟ್ಟಾಣಿ, ಕಾರ್ತಿಕ ಚಿಟ್ಟಾಣಿ, ನಾಗರಾಜ ಭಟ್ಟ ಕುಂಕಿಪಾಲ, ಶ್ರೀಧರ ಅಣಲಗಾರ, ಗುರು ಭಟ್ಟ ಜಂಬೇಸಾಲ, ವೆಂಕಟರಮಣ ಭಟ್ಟ ಕವಡಿಕೆರೆ, ಅನೀಶ ಭಟ್ಟ ಹಶಿನಮನೆ ಪಾತ್ರ ನಿರ್ವಹಿಸಲಿದ್ದಾರೆ.







