ಯಲ್ಲಾಪುರ ತಾಲೂಕಿನ ಅರಬೈಲ್ ಸಮೀಪದ ಕೆಳಾಸೆ ಹೊಳೆಯಲ್ಲಿ ಮುಳುಗಿ ಯುವಕನೊಬ್ಬ ಕಾಣೆಯಾದ ಘಟನೆ ಮಂಗಳವಾರ ಸಂಜೆ ನಡೆದಿದೆ.
ಯಲ್ಲಾಪುರದ ಸಬಗೇರಿ ನಿವಾಸಿ ಸಾಗರ್ ರಾಮಾ ದೇವಾಡಿಗ (23) ಕಾಣೆಯಾದ ಯುವಕ. ಈತ ತನ್ನ ಸ್ನೇಹಿತರಾದ ದಿನೇಶ, ಪುನಿತ್, ವಿನೋದ ಎಂಬವರ ಜೊತೆ ಸೇರಿ ಬರ್ತಡೆ ಪಾರ್ಟಿ ಮಾಡಲು ಇಡಗುಂದಿ ಗ್ರಾಮ ಪಂಚಾಯತ ವ್ಯಾಪ್ತಿಯ, ಅರಬೈಲ್ ಸಮೀಪದ ಕೆಳಾಸೆ ಹೊಳೆಗೆ ಹೋಗಿದ್ದರು. ಸಂಜೆ ಸುಮಾರು 4.30 ರ ವೇಳೆಗೆ ಸಾಗರ್ ರಾಮಾ ದೇವಾಡಿಗ ಆಕಸ್ಮಿಕವಾಗಿ ಹೊಳೆಯಲ್ಲಿ ಬಿದ್ದು ಕಾಣೆಯಾಗಿರುವುದಾಗಿ ತಿಳಿದು ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸಾಗರ್ ಗಾಗಿ ಶೋಧ ನಡೆಸುತ್ತಿದ್ದಾರೆ.







