ರವೀಂದ್ರನಗರದ ದೇವರಕಾಡು ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ಯುವಕನ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರವೀಂದ್ರನಗರ ನಿವಾಸಿ ಲಕ್ಷ್ಮಣ ಮಹೇಶ ಮರಾಠಿ ಎಂಬಾತ ರವೀಂದ್ರನಗರದ ದೇವರಕಾಡು ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿ ಓಡಾಡುತ್ತಿದ್ದ.
ಈ ವೇಳೆ ದಾಳಿ ನಡೆಸಿದ ಪೊಲೀಸರು, ಅವನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಗಾಂಜಾ ಸೇವಿಸಿರುವುದು ಧೃಢಪಟ್ಟಿದೆ. ಈ ಕುರಿತು ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.







