ಪ್ರಚಾರ ಪ್ರಿಯ ಪ್ರಿಯಾಂಕ್ ಖರ್ಗೆ, ಮುಂದಿನ ಸಚಿವ ಸಂಪುಟದಿಂದ ತಮ್ಮನ್ನು ಕೈಬಿಡುವುದು ಖಚಿತವಾಗುತ್ತಿದ್ದಂತೆ ಹತಾಶರಾಗಿದ್ದಾರೆ ಹೊಸ ಪ್ರಚಾರ ಆರಂಭಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸುವ ಅವರ ಹೇಳಿಕೆ ಬಾಲಿಶತನದ್ದು ಎಂದು ಬಿಜೆಪಿ ಮುಖಂಡ ರಾಮು ನಾಯ್ಕ ವ್ಯಂಗ್ಯವಾಡಿದ್ದಾರೆ.
ಕಳೆದ ನೂರು ವರ್ಷಗಳಲ್ಲಿ ಮೂರು ತಲೆಮಾರುಗಳು ಕಳೆದುಹೋದವು. ಇವರ ರಾಜಕೀಯ ನೇತಾರ ರಾಜೀವ ಗಾಂಧಿ, ಅವರಮ್ಮ ಇಂದಿರಾ ಗಾಂಧಿ, ಅವರಪ್ಪ ಜವಾಹರಲಾಲ ನೆಹರು ಯಾರಿಂದಲೂ ಸಂಘವನ್ನು ಬಗ್ಗಿಸಲು ಆಗಲಿಲ್ಲ. ಇನ್ನೂ ಬೆಳೆಯುತ್ತಲೇ ಇದೆ. ಕಳೆದ ನೂರು ವರ್ಷಗಳಲ್ಲಿ ಸಂಘ ರಾಷ್ಟ್ರವ್ಯಾಪಿ ಹೆಮ್ಮರವಾಗಿ ಬೆಳೆದಿದೆ. ಈಗ ಬಗ್ಗಿಸುವ ಮಾತನಾಡುವುದು ಹುಚ್ಚುತನದ ಪರಮಾವಧಿ.
ಅದು ಖರ್ಗೆಗೂ ಗೊತ್ತು. ಆದರೆ, ತಾನು ಸಂಘವನ್ನು ಇಷ್ಟು ಬಹಿರಂಗವಾಗಿ ಟೀಕಿಸಿದ ಕಾರಣಕ್ಕಾಗಿಯಾದರೂ ರಾಹುಲ್ ಗಾಂಧಿ ಪ್ರಸನ್ನರಾಗಿ, ತಮ್ಮ ಸಚಿವ ಸ್ಥಾನ ಅಬಾಧಿತವಾಗಿ ಉಳಿಯಬಹುದೆಂಬ ದೂರದ ಲೆಕ್ಕಾಚಾರ ಮರಿ ಖರ್ಗೆಯವರದು ಎಂದು ರಾಮು ನಾಯ್ಕ ವಿಶ್ಲೇಷಿಸಿದ್ದಾರೆ.







