ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿ ಮೂವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಯಲ್ಲಾಪುರ ತಾಲೂಕಿನ ಬಳಗಾರ ಕ್ರಾಸ್ ಬಳಿ ನಡೆದಿದೆ.
ಕಾರು ಚಾಲಕ ಇಡಗುಂದಿಯ ಮಹೇಶ ಹರಿ ಭಟ್ಟ, ಶಾಂತಿಕಾ ಗಂಗಾಧರ ಗಾಂವ್ಕರ ಹಾಗೂ ಇನ್ನೊಂದು ಕಾರಿನ ಚಾಲಕ ಧಾರವಾಡದ ವಿಶ್ವನಾಥ ಅಮರ ಶೆಟ್ಟಿ ಗಾಯಗೊಂಡವರು.
ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ವಿಶ್ವನಾಥ ಶೆಟ್ಟಿ ಅವರ ಕಾರು, ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಎರಡೂ ವಾಹನಗಳು ಜಖಂಗೊಂಡಿದ್ದು, ಮೂವರು ಗಾಯಗೊಂಡಿದ್ದಾರೆ. ಅವರನ್ನು ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಕಾರು ಚಾಲಕ ವಿಶ್ವನಾಥ ಅಮರ ಶೆಟ್ಟಿ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







