6
  • Latest
ಅಕ್ಟೋಬರ್ 31 ರಿಂದ ನವೆಂಬರ್ 4 ರವರೆಗೆ ಸಂಕಲ್ಪ ಉತ್ಸವ

ಅಕ್ಟೋಬರ್ 31 ರಿಂದ ನವೆಂಬರ್ 4 ರವರೆಗೆ ಸಂಕಲ್ಪ ಉತ್ಸವ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಕ್ಟೋಬರ್ 31 ರಿಂದ ನವೆಂಬರ್ 4 ರವರೆಗೆ ಸಂಕಲ್ಪ ಉತ್ಸವ

ಶ್ರೀ ನ್ಯೂಸ್ by ಶ್ರೀ ನ್ಯೂಸ್
October 15, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರದ ಸಂಕಲ್ಪ ಸೇವಾ ಸಂಸ್ಥೆಯ ವತಿಯಿಂದ 39 ನೇಯ ವರ್ಷದ ಸಂಕಲ್ಪ ಉತ್ಸವ ಅ 31 ರಿಂದ ನ 4 ವರೆಗೆ ಅದ್ದೂರಿಯಾಗಿ ಪಟ್ಟಣದ ಗಾಂಧಿ ಕುಟೀರದಲ್ಲಿ ನಡೆಯಲಿದೆ ಎಂದು ಸಂಕಲ್ಪ ಸಂಸ್ಥೆ ಅಧ್ಯಕ್ಷ ಪ್ರಮೋದ ಹೆಗಡೆ ಹೇಳಿದರು.

ಅವರು ಬುಧವಾರ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಪತ್ರಕರ್ತರಿಗೆ ಮಾಹಿತಿ ನೀಡಿದರು. ರಾಜ್ಯದಲ್ಲಿಯೇ ನಿರಂತರವಾಗಿ ಸಾಂಸ್ಕೃತಿಕ ತೇರನ್ನೆಳೆಯುತ್ತಿರುವ ಕೆಲವೇ ಸಂಸ್ಥೆಗಳಲ್ಲಿ ಸಂಕಲ್ಪವೂ ಒಂದಾಗಿ ಹೊರಹೊಮ್ಮಿದೆ. ಕನ್ನಡ ಜೀವನಹಬ್ಬ ಸಂಸ್ಕೃತಿಯ ಸುಗ್ಗಿ ಇದಾಗಿದ್ದು, ನಾಡಿನ ನೂರಾರು ಕಲಾವಿದರನ್ನು ಬೆಳೆಸಿದ ಹೆಗ್ಗಳಿಕೆ ಹೊಂದಿದೆ ಎಂದರು.

Advertisement. Scroll to continue reading.
ADVERTISEMENT
ADVERTISEMENT

ಅಕ್ಟೋಬರ್ 31 ರಂದು ಸಂಜೆ 5.30 ಕ್ಕೆ ಸ್ವರ್ಣವಲ್ಲೀ ಶ್ರೀಗಳು ಹಾಗೂ ಎಡನೀರು ಶ್ರೀಗಳು ಉತ್ಸವವನ್ನು ಉದ್ಘಾಟಿಸಲಿದ್ದಾರೆ. 5 ದಿನದ ಉತ್ಸವದಲ್ಲಿ ಶಿರಳಗಿ ಬ್ರಹ್ಮಾನಂದ ಭಾರತಿ ಶ್ರೀಗಳು, ಬಾರ್ಕೂರು ಶ್ರೀಗಳು, ನೆಲೆಮಾವು ಶ್ರೀಗಳು, ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಭಾಗವಹಿಸಲಿದ್ದಾರೆ.
ಪ್ರತಿ ದಿನ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷಗಾನ, ತಾಳಮದ್ದಲೆ, ಭರತನಾಟ್ಯ, ಕೀರ್ತನೆ, ಸಂಗೀತ, ನಾಟಕ, ಗಮಕ ವಾಚನ, ಭಜನೆ ನಡೆಯಲಿದೆ. ಪುಸ್ತಕ ಬಿಡುಗಡೆ, ರಾಷ್ಟ್ರಭಕ್ತಿ ಕಾರ್ಯಕ್ರಮ, ನಿವೃತ್ತ ಸೈನಿಕರಿಗೆ, ಸಾಧಕರಿಗೆ ಸನ್ಮಾನ, ಪುರಾಣ ಲಹರಿ ಕಾರ್ಯಕ್ರಮ ನಡೆಯಲಿದೆ. ಗೋ ಉತ್ಪನ್ನ ಮಳಿಗೆ, ಆಯುರ್ವೇದ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ವಿವರಿಸಿದರು.

ಸಂಸ್ಥೆಯ ಸಂಚಾಲಕ ಪ್ರಸಾದ ಹೆಗಡೆ ಮಾತನಾಡಿ, ಈ ಬಾರಿ ವಿವಿಧ ಕ್ಷೇತ್ರಗಳ ಸಾಧಕರಾದ ಬಿ.ಎನ್.ವಾಸರೆ, ರಾಮನಾಥ ಭಟ್ಟ, ಯಮುನಾ ನಾಯ್ಕ, ಕಲ್ಲಪ್ಪ ನಾಯ್ಕ, ನರಸಿಂಹ ಸಾತೊಡ್ಡಿ, ಸುಬ್ರಾಯ ಬಿದ್ರೆಮನೆ, ಚಿದಾನಂದ ಹರಿಜನ, ಡಾ.ನಾರಾಯಣ ಹುಳ್ಸೆ ಅವರಿಗೆ ಸಂಕಲ್ಪ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.

Advertisement. Scroll to continue reading.

ಸಂಸ್ಥೆಯ ಸದಸ್ಯ ಸಿ.ಜಿ.ಹೆಗಡೆ ಮಾತನಾಡಿ, ಪ್ರತಿ ದಿನ ಸುಬ್ರಹ್ಮಣ್ಯ ಚಿಟ್ಟಾಣಿ ಅವರ ನೇತೃತ್ವದಲ್ಲಿ ಪ್ರಸಿದ್ಧ ಕಲಾವಿದರಿಂದ ಬಬ್ರುವಾಹನ, ಗದಾಯುದ್ಧ, ಕಾಳಿದಾಸ, ದ್ರೌಪದಿ ಪ್ರತಾಪ, ಪಾಂಚಜನ್ಯ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದರು. ಸಂಸ್ಥೆಯ ಸದಸ್ಯ ಬಾಬು ಬಾಂದೇಕರ್ ಇದ್ದರು.

 

ShareSendTweetShare
ADVERTISEMENT
Previous Post

ಟಿಎಂಎಸ್ ಗೆ ಆಡಳಿತಾಧಿಕಾರಿ ನೇಮಕ

Next Post

ಚದುರಂಗದ ಚತುರ ಅಶ್ವನ್ ರಾಜ್ಯಮಟ್ಟಕ್ಕೆ ಆಯ್ಕೆ

Next Post
ಚದುರಂಗದ ಚತುರ ಅಶ್ವನ್ ರಾಜ್ಯಮಟ್ಟಕ್ಕೆ ಆಯ್ಕೆ

ಚದುರಂಗದ ಚತುರ ಅಶ್ವನ್ ರಾಜ್ಯಮಟ್ಟಕ್ಕೆ ಆಯ್ಕೆ

ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ತುಂಬೆಬೀಡಿನಲ್ಲಿ ಜನಜಾಗೃತಿ ಅಭಿಯಾನ ಅಕ್ಟೋಬರ್ 19 ರಂದು: ಸ್ವರ್ಣವಲ್ಲೀ ಶ್ರೀಗಳ ಸಾನ್ನಿಧ್ಯ

ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ತುಂಬೆಬೀಡಿನಲ್ಲಿ ಜನಜಾಗೃತಿ ಅಭಿಯಾನ ಅಕ್ಟೋಬರ್ 19 ರಂದು: ಸ್ವರ್ಣವಲ್ಲೀ ಶ್ರೀಗಳ ಸಾನ್ನಿಧ್ಯ

ಹೆದ್ದಾರಿಯ ಹೊಂಡಕ್ಕಿಳಿದು ಹೊರಟ್ಟಿಯವರ ಕಾರು ಪಂಕ್ಚರ್!

ಹೆದ್ದಾರಿಯ ಹೊಂಡಕ್ಕಿಳಿದು ಹೊರಟ್ಟಿಯವರ ಕಾರು ಪಂಕ್ಚರ್!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.