6
  • Latest
ಕೈಗಡಿ ಹೊಳೆಯಲ್ಲಿ ಮುಳುಗಿದ ಸಾಗರನದ್ದು ಸಹಜ ಸಾವಲ್ಲ, ಕೊಲೆ: ಕುಟುಂಬದವರಿಂದ ದೂರು

ಕೈಗಡಿ ಹೊಳೆಯಲ್ಲಿ ಮುಳುಗಿದ ಸಾಗರನದ್ದು ಸಹಜ ಸಾವಲ್ಲ, ಕೊಲೆ: ಕುಟುಂಬದವರಿಂದ ದೂರು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೈಗಡಿ ಹೊಳೆಯಲ್ಲಿ ಮುಳುಗಿದ ಸಾಗರನದ್ದು ಸಹಜ ಸಾವಲ್ಲ, ಕೊಲೆ: ಕುಟುಂಬದವರಿಂದ ದೂರು

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಕೈಗಡಿ ಸಮೀದ ಹೊಳೆಯಲ್ಲಿ ಮುಳುಗಿ ಮೃತಪಟ್ಟ ಯಲ್ಲಾಪುರ ಪಟ್ಟಣದ ಸಬಗೇರಿಯ ಸಾಗರ ದೇವಾಡಿಗ ಸಹಜವಾಗಿ ಸತ್ತಿಲ್ಲ. ಬರ್ತಡೆ ಪಾರ್ಟಿ ನೆಪದಲ್ಲಿ ಸ್ನೇಹಿತರೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಕುರಿತು ಮೃತ ಯುವಕನ ತಂದೆ ರಾಮಾ ನಾರಾಯಣ ದೇವಾಡಿಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಕಳೆದ ಅಕ್ಟೋಬರ್ 7 ರಂದು ನನ್ನ ಮಗ ಸಾಗರನಿಗೆ ಆತನ ಗೆಳೆಯನಾದ ಪುನಿತ್ ಅಶೋಕ ಗೊಂದಳೆ ಕರೆ ಮಾಡಿ, ‘ನನ್ನ ಹುಟ್ಟುಹಬ್ಬ ಇದೆ, ಕವಡಿಕೆರೆ ಬಳಿ ಪಾರ್ಟಿ ಮಾಡೋಣ ಬಾ’ ಎಂದು ಕರೆದಿದ್ದ. ಪಾರ್ಟಿಗೆಂದು ಕವಡಿಕೆರೆಗೆ ಹೋದ ಮಗ ಕೈಗಡಿ ಸಮೀಪದ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ ಎಂದು ಅವನೊಂದಿಗೆ ಹೋದ ಗೆಳೆಯರಾದ ಪುನೀತ ಗೊಂದಳೆ, ದಿನೇಶ ಪ್ರಭಾಕರ ನಾಯ್ಕ, ವಿನೋದ ಗೊಂದಳೆ, ನಾಗರಾಜ ಭಟ್ಟ, ರಾಹುಲ್ ಬಂದು ಪೊಲೀಸ್ ಠಾಣೆಯಲ್ಲಿ ದೂರಿದ್ದಾರೆ. ಅವರು ಕವಡಿಕೆರೆ ಬದಲಿಗೆ ಕೈಗಡಿ ಹೊಳೆಗೆ ಹೋಗಿರುವುದು ನಮಗೆ ತಿಳಿದದ್ದು ಆಗಲೇ.

ಪಾರ್ಟಿಗೆಂದು ಹೋಗಿ ನೀರಲ್ಲಿ ಮುಳುಗಿ‌ ನಾಪತ್ತೆಯಾಗಿದ್ದಾನೆ ಎನ್ನುವ ಸುದ್ದಿ ನನಗೆ ಆಘಾತ ಉಂಟು ಮಾಡಿದೆ. ನಾಪತ್ತೆಯಾಗಿದ್ದ ಮಗ ಅಕ್ಟೋಬರ್ 9 ರಂದು ಮುಳುಗಿದ ಸ್ಥಳದಿಂದ 500 ಮೀ ದೂರದಲ್ಲಿ ಶವವಾಗಿ ದೊರಕಿದ್ದಾನೆ.

ಪುನಿತ್ ಅಶೋಕ ಗೊಂದಳೆ ತನ್ನ ಹುಟ್ಟುಹಬ್ಬದ ನಿಮಿತ್ತ ತನ್ನ ಸ್ನೇಹಿತರ ಜೊತೆಗೆ ನನ್ನ ಮಗನನ್ನು ಕರೆದುಕೊಂಡು ಹೋಗಿ, ಯಾವುದೋ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ, ತಮ್ಮೊಳಗೆ ಸಂಚು ರೂಪಿಸಿ ಕೊಲೆ ಮಾಡಿದ್ದಾರೆಂದು ರಾಮಾ ದೇವಡಿಗ ದೂರಿದ್ದಾರೆ.

ಮಗನ ಸಾವಿನ ಹಿಂದೆ ಕೊಲೆಯ ಶಂಕೆ ಇದ್ದು, ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸಿ‌ ನ್ಯಾಯ ದೊರಕಿಸಿ ಕೊಡಬೇಕೆಂದು ಆಗ್ರಹಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ShareSendTweetShare
Previous Post

ನಾಳೆ ಬೆಳಿಗ್ಗೆಯಿಂದ ಸಂಜೆಯವರೆಗೂ ಕರೆಂಟ್ ಇರಲ್ಲ: ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

Next Post

ಅಂತೂ ಸಿಕ್ಕಿಬಿದ್ದ ಚಿನ್ನದ ಕಳ್ಳ

Next Post
ಅಂತೂ ಸಿಕ್ಕಿಬಿದ್ದ ಚಿನ್ನದ ಕಳ್ಳ

ಅಂತೂ ಸಿಕ್ಕಿಬಿದ್ದ ಚಿನ್ನದ ಕಳ್ಳ

ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ವಿರೋಧಿಸಿ ಸಮಾವೇಶ: ಸಂಘಟಿತ ಹೋರಾಟಕ್ಕೆ ಸ್ವರ್ಣವಲ್ಲೀ ಶ್ರೀಗಳ‌ ಕರೆ

ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ವಿರೋಧಿಸಿ ಸಮಾವೇಶ: ಸಂಘಟಿತ ಹೋರಾಟಕ್ಕೆ ಸ್ವರ್ಣವಲ್ಲೀ ಶ್ರೀಗಳ‌ ಕರೆ

ಮರಕ್ಕೆ ಗುದ್ದಿದ ಎಸ್.ಆರ್.ಎಸ್ ಬಸ್: ಮುರಿಯಿತು ಚಾಲಕನ ಕಾಲು

ಮರಕ್ಕೆ ಗುದ್ದಿದ ಎಸ್.ಆರ್.ಎಸ್ ಬಸ್: ಮುರಿಯಿತು ಚಾಲಕನ ಕಾಲು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.