ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ನಡೆದಿದೆ.
ಅಂಕೋಲಾ ತಾಲೂಕಿನ ಹಳವಳ್ಳಿಯ ದೇವೇಂದ್ರ ನಾಗೇಶ ಸಿದ್ದಿ ಗಾಯಗೊಂಡ ವ್ಯಕ್ತಿ. ಈತ ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಬೈಕ್ ಮೇಲೆ ಹೋಗುವಾಗ ಎದುರಿನಿಂದ ಬಂದ ಕಾರ್ ಗೆ ಡಿಕ್ಕಿ ಹೊಡೆದು, ಗಾಯಗೊಂಡಿದ್ದಾನೆ.
ಗಾಯಾಳುವಿಗೆ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರು ಚಾಲಕ ಗೌತಮ ಕೋಟೆಮನೆ ದೂರು ನೀಡಿದ್ದು, ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







