ಯಲ್ಲಾಪುರ ಪಟ್ಟಣದ ಕಾಳಮ್ಮನಗರದ ತನ್ನ ಅಂಗಡಿಯೊಳಗೆ ಸಾರಾಯಿ ಕುಡಿಯಲು ಅವಕಾಶ ಮಾಡಿಕೊಟ್ಟ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.
ಸಂತೋಷ ದಿಂಗಬರ ಜೋಸಿ ಎಂಬವರು ಕಾಳಮ್ಮನಗರದಲ್ಲಿ ಕ್ರೀಡಾಂಗಣದ ಪಕ್ಕ ಇರುವ ತನ್ನ ಅಂಗಡಿಯಲ್ಲಿ ಸಾರ್ವಜನಿಕರಿಗೆ ಸಾರಾಯಿ ಕುಡಿಯಲು ಅವಕಾಶ ಮಾಡಿಕೊಟ್ಟಿದ್ದರು.
ಈ ವೇಳೆ ದಾಳಿ ನಡೆಸಿದ ಪೊಲೀಸರಿಗೆ ವಿಸ್ಕಿಯ ಎರಡು ಖಾಲಿ ಪೌಚ್ ಗಳು, ಒಂದು ಪ್ಲಾಸ್ಟಿಕ್ ಗ್ಲಾಸ್ ಮತ್ತು ಮುಕ್ಕಾಲಯ ಲೀಟರ್ ನ ಒಂದು ಖಾಲಿ ನೀರಿನ ಬಾಟಲಿ ಬಿಟ್ಟರೆ ಬೇರೇನೂ ಸಿಕ್ಕಿಲ್ಲವಂತೆ!
ಅಂಗಡಿ ಮಾಲೀಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ







