ಯಲ್ಲಾಪುರ ತಾಲೂಕಿನ ಅಣಲಗಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸ್ವರ್ಣವಲ್ಲೀ ಮಠ, ಕರಡೊಳ್ಳಿಯ ಗೋವರ್ಧನ ಗೋಶಾಲೆಗಳ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀಮದ್ಭಾಗವತ ಸಪ್ತಾಹ ಯಜ್ಞ ನಡೆಯುತ್ತಿದೆ.
ಸಪ್ತಾಹದ ಎರಡನೇ ದಿನ ಪ್ರವಚನ ನೀಡಿದ, ವಿದ್ವಾನ್ ವಾಸುದೇವ ಭಟ್ಟ ಹಂದಲಸು, ವೇದಗಳೇ ಮೂಲ ಬೇರಾಗಿರುವ ಸನಾತನ ಧರ್ಮವನ್ನು ನಾಶಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು. ಸರಸ್ವತಿ-ಬ್ರಹ್ಮರಿಗೆ ನೀಡಿದ ಮಾತಿನಂತೆ ವಿಷ್ಣುವೇ ಕೃಷ್ಣನಾಗಿ ಅವತರಿಸಿದ ಕಥಾಭಾಗವನ್ನು ಪ್ರಸ್ತುತಪಡಿಸಿದರು.
ಇದಕ್ಕೂ ಮುನ್ನ ವೈದಿಕರಿಂದ ಭಾಗವತದ ಮೂಲಗ್ರಂಥ ಪಾರಾಯಣ ನಡೆಯಿತು. ಲಕ್ಷ್ಮೀ ಹಾಗೂ ಗೋಪಾಲಕೃಷ್ಣ ಭಟ್ಟ ದಂಪತಿ ಪೂಜೆ ನೆರವೇರಿಸಿದರು. ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.







