ಲಾರಿ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ಶಿರಲೆ ಕ್ರಾಸ್ ಬಳಿ ನಡೆದಿದೆ.
ಬಿಹಾರದ ಮುಖೇಶಕುಮಾರ ತಿಕೇದ ನಾರಾಯಣ ದೇವ (27) ಮೃತ ಚಾಲಕ. ಈತ ಲಾರಿಯನ್ನು ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಚಲಾಯಿಸಿಕೊಂಡು ಬರುವಾಗ ಶಿರಲೆ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ.
ಪಲ್ಟಿಯಾಗುವ ಪೂರ್ವದಲ್ಲಿ ಲಾರಿಯಿಂದ ಹೊರಕ್ಕೆ ಹಾರಿದ ಚಾಲಕ ತಲೆ ಹಾಗೂ ಕೈಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಲಾರಿ ಜಖಂಗೊಂಡಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







