ಯಲ್ಲಾಪುರ ತಾಲೂಕಿನ ಮಾಗೋಡ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವದ ಪ್ರಯುಕ್ತ ಯಕ್ಷಗಾನ ಪ್ರದರ್ಶನ ಇಂದು ರಾತ್ರಿ 8 ಗಂಟೆಯಿಂದ ನಡೆಯಲಿದೆ. ಇದೇ ವೇಳೆ ಹಿರಿಯ ಮದ್ದಲೆವಾದಕ ಶಂಕರ ಭಾಗ್ವತ ಅವರನ್ನು ಸನ್ಮಾನಿಸಲಾಗುವುದು.
ಪ್ರಸಿದ್ಧ ಕಲಾವಿದರಿಂದ ಚಂದ್ರಹಾಸ ಚರಿತ್ರೆ ಹಾಗೂ ಬಬ್ರುವಾಹನ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ಕೇಶವ ಹೆಗಡೆ ಕೊಳಗಿ, ಅನಂತ ಹೆಗಡೆ ದಂತಳಿಗೆ, ಶಶಾಂಕ ಬೋಡೆ, ಮಂಜುನಾಥ ಭಟ್ಟ ದೇವದಮನೆ ಭಾಗವಹಿಸುವರು. ದ್ದಲೆವಾದಕರಾಗಿ ಶಂಕರ ಭಾಗ್ವತ ಯಲ್ಲಾಪುರ, ಅನಿರುದ್ಧ ಹೆಗಡೆ ವರ್ಗಾಸರ, ಚಂಡೆವಾದಕರಾಗಿ ಪ್ರಶಾಂತ ಹೆಗಡೆ ಕೈಗಡಿ ಭಾಗವಹಿಸಲಿದ್ದಾರೆ.
ಗಣಪತಿ ಹೆಗಡೆ ತೋಟಿಮನೆ, ಈಶ್ವರ ನಾಯ್ಕ ಮಂಕಿ, ಉದಯ ಹೆಗಡೆ ಕಡಬಾಳ, ಸನ್ಮಯ ಭಟ್ಟ ಮಲವಳ್ಳಿ, ಮಂಜುನಾಥ ಹೆಗಡೆ ಹಿಲ್ಲೂರು, ಶ್ರೀಧರ ಅಣಲಗಾರ, ಆದರ್ಶ ಭಟ್ಟ ಈರಾಪುರ, ವೆಂಕಟ್ರಮಣ ಭಟ್ಟ ಕವಡಿಕೆರೆ ಪಾತ್ರ ನಿರ್ವಹಿಸಲಿದ್ದಾರೆ. ಸ್ತ್ರೀ ಪಾತ್ರದಲ್ಲಿ ಸದಾಶಿವ ಮಲವಳ್ಳಿ, ನಾಗರಾಜ ಭಟ್ಟ ಕುಂಕಿಪಾಲ, ದೀಪಕ ಭಟ್ಟ ಕುಂಕಿ ಹಾಗೂ ನಾಗೇಂದ್ರ ಭಟ್ಟ ಮೂರೂರು ಹಾಸ್ಯ ಪಾತ್ರ ನಿರ್ವಹಿಸಲಿದ್ದಾರೆ.







