ಯಲ್ಲಾಪುರ ಪಟ್ಟಣದ ಮಾಗೋಡ ಕ್ರಾಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರತಿಬೈಲಿನ ಹರೀಶ ನಾಗರಾಜ ನಾಯ್ಕ ಎಂಬ ಯುವಕ ಮಾಗೋಡ ಕ್ರಾಸ್ ಬಳಿ ಗಾಂಜಾ ಸೇವಿಸಿದ ಅಮಲಿನಲ್ಲಿ ಓಡಾಡುತ್ತಿರುವಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.
ಈತನ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







