ಹಾನಗಲ್ನಲ್ಲಿ ಸೆ.5ರಂದು ಪ್ರಜಾಸೇವೆ ಸಭೆ: ಸಚಿವ ರುದ್ರಪ್ಪ ಲಮಾಣಿ ಭಾಗಿ
ಹಾನಗಲ್: ಹಾನಗಲ್ ಪಟ್ಟಣದ ಶ್ರೀ ಕುಮಾರೇಶ್ವರ ಮಠದಲ್ಲಿ ಸೆಪ್ಟೆಂಬರ್ 5ರಂದು ತಾಲೂಕು ಮಟ್ಟದ ಪ್ರಜಾಸೇವೆ ಸಭೆ ನಡೆಯಲಿದೆ.
ಸೆಪ್ಟೆಂಬರ್ 5ರಂದು ಬೆಳಿಗ್ಗೆ 10.30 ಗಂಟೆಗೆ ಸಭೆ ಆಯೋಜಿಸಲಾಗಿದ್ದು, ಸಕ್ಕರೆ ಮತ್ತು ಜವಳಿ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ರುದ್ರಪ್ಪ ಲಮಾಣಿ ಅವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ತಾಲೂಕು ಮಟ್ಟದಲ್ಲಿ ಸಾರ್ವಜನಿಕರ ಸಮಸ್ಯೆಗಳು ಹಾಗೂ ವಿವಿಧ ಅಹವಾಲುಗಳನ್ನು ಆಲಿಸಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸುವ ನಿಟ್ಟಿನಲ್ಲಿ ಪ್ರಜಾಸೇವೆ ಸಭೆ ನಡೆಯಲಿದೆ.




