ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ.-ಕಿಸಾನ್) ಯೋಜನೆಯಡಿ ಅರ್ಹ ರೈತರು ನೆರವು ಪಡೆಯಲು ತಾಲ್ಲೂಕಿನ ಎಲ್ಲ ಅರ್ಹ ರೈತರು ಬಯೋಮೆಟ್ರಿಕ್ ಅಥವಾ ಮುಖ ಗುರುತಿಸುವಿಕೆ (Facial Recognition) ಆಧಾರಿತ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ ಎಂದು ಹಾವೇರಿ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಪಿ.ಎಂ.-ಕಿಸಾನ್ ಯೋಜನೆಯಡಿ ಹಾವೇರಿ ತಾಲ್ಲೂಕಿನ ಅರ್ಹ ರೈತರಿಗೆ ನಿಯಮಾನುಸಾರ ಆರ್ಥಿಕ ನೆರವು ನೀಡಲಾಗುತ್ತಿದೆ. ಯೋಜನೆಯ ಸೌಲಭ್ಯವನ್ನು ನಿರಂತರವಾಗಿ ಪಡೆಯಲು ಇ-ಕೆವೈಸಿ ಪೂರ್ಣಗೊಳಿಸುವುದು ಅತ್ಯಗತ್ಯವಾಗಿದೆ. ಇ-ಕೆವೈಸಿ ಪೂರ್ಣಗೊಳಿಸದ ತಾಲ್ಲೂಕಿನ ಅರ್ಹ 22315 ರೈತರಿಗೆ ಮುಂದಿನ ಕಂತಿನ ಹಣ ಜಮೆಯಾಗುವ ಸಾಧ್ಯತೆ ಇರುವುದರಿಂದ ರೈತರು ಕೂಡಲೇ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಇ-ಕೆವೈಸಿ ಮಾಡಿಸಿಕೊಳ್ಳಲು ಎರಡು ಸರಳ ವಿಧಾನಗಳು
ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ:
ರೈತರು ತಮ್ಮ ಹತ್ತಿರದ ನಾಗರಿಕ ಸೇವಾ ಕೇಂದ್ರ (CSC), ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳು ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಬಿ.ಎನ್.ಎ. ಲಾಗಿನ್ ಮೂಲಕ ಆಧಾರ್ ಕಾರ್ಡ್ನೊಂದಿಗೆ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸಿಕೊಳ್ಳಬಹುದು.
ಮೊಬೈಲ್ ತಂತ್ರಜ್ಞಾನ ಆಧಾರಿತ ಇ-ಕೆವೈಸಿ:
ಗ್ರಾಮ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಎನ್.ಸಿ.ಗಳ ಮೂಲಕ ಆಧಾರ್ ಗೋಲ್ಡ್ ಫೇಸ್ ಪೋರ್ಟಲ್ನಲ್ಲಿ ಲಭ್ಯವಿರುವ PM-KISAN GoI ಮೊಬೈಲ್ ಆ್ಯಪ್ ಅನ್ನು ಡೌನ್ಲೋಡ್ ಮಾಡಿಕೊಂಡು, ರೈತರು ತಮ್ಮ ಮೊಬೈಲ್ನಲ್ಲಿಯೇ ಮುಖ ಗುರುತಿಸುವಿಕೆ ಮೂಲಕ ಇ-ಕೆವೈಸಿ ಪೂರ್ಣಗೊಳಿಸಿಕೊಳ್ಳಬಹುದು.




