6
  • Latest
ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ADVERTISEMENT
  • Home
Wednesday, September 9, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

Kiran Reporter Haveri by Kiran Reporter Haveri
September 9, 2026
in ಸ್ಥಳೀಯ
advt advt advt
ADVERTISEMENT

 

ADVERTISEMENT

ಹಾವೇರಿ: ಮಳೆ ಕೊರತೆಯಿಂದ ಬೆಳೆ ಕೈಕೊಟ್ಟಿದ್ದು, ಸಾಲದ ಹೊರೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾಡಿದ ಸಾಲ ತೀರಿಸಲು ಇದೀಗ ತಮ್ಮ ಜೀವನಾಧಾರವಾಗಿದ್ದ ಜೋಡಿ ಎತ್ತುಗಳನ್ನೇ ಮಾರಾಟ ಮಾಡುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಹಾವೇರಿ ಜಾನುವಾರು ಮಾರುಕಟ್ಟೆಗೆ ನೂರಾರು ರೈತರು ತಮ್ಮ ಜೋಡಿ ಎತ್ತುಗಳನ್ನು ಮಾರಾಟಕ್ಕೆ ತರುತ್ತಿದ್ದಾರೆ. ಆದರೆ, ಎತ್ತುಗಳನ್ನು ಖರೀದಿಸಲು ರೈತರು ಹಾಗೂ ಜಾನುವಾರು ಸಾಕಾಣಿಕೆದಾರರು ಮುಂದೆ ಬಾರದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ವಾರಗಟ್ಟಲೆ ಮಾರುಕಟ್ಟೆಯಲ್ಲಿ ಎತ್ತುಗಳನ್ನು ಇಟ್ಟುಕೊಂಡರೂ ಖರೀದಿದಾರರು ಸಿಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

Advertisement. Scroll to continue reading.
Advertisement. Scroll to continue reading.

“ಜೀವನ ನಡೆಸಲು ಹಣವಿಲ್ಲ. ಮಾಡಿದ ಸಾಲ ತೀರಿಸಲು ಎತ್ತುಗಳನ್ನು ಮಾರಾಟಕ್ಕೆ ತಂದಿದ್ದೇವೆ. ಆದರೆ ಎತ್ತುಗಳನ್ನು ಖರೀದಿಸುವವರೇ ಇಲ್ಲ. ನಮ್ಮ ಬಳಿ ಹಣವಿಲ್ಲ, ಬೆಳೆ ಇಲ್ಲ. ನಮ್ಮ ಎತ್ತುಗಳನ್ನು ಖರೀದಿಸಬೇಕಾದರೂ ರೈತರೇ ಬರಬೇಕು. ಆದರೆ ಮಳೆ ಕೊರತೆಯಿಂದ ರೈತರಿಗೂ ಬೆಳೆ ಬಂದಿಲ್ಲ. ಹೀಗಾಗಿ ನಮ್ಮ ಎತ್ತುಗಳನ್ನು ಕೊಳ್ಳಲು ಬೇರೆ ರೈತರೂ ಮುಂದೆ ಬರುತ್ತಿಲ್ಲ” ಎಂದು ರೈತರು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಜೋಡಿ ಎತ್ತುಗಳಿಗೆ ₹60 ಸಾವಿರದಿಂದ ₹80 ಸಾವಿರದವರೆಗೆ ಬೆಲೆ ನಿಗದಿಪಡಿಸಿದರೂ ಖರೀದಿದಾರರು ಸಿಗುತ್ತಿಲ್ಲ ಎನ್ನುವುದು ರೈತರ ಅಳಲು. ಇನ್ನು ಕೆಲ ರೈತರು ₹1.50 ಲಕ್ಷದಿಂದ ₹2 ಲಕ್ಷದವರೆಗೆ ಮೌಲ್ಯ ಹೊಂದಿರುವ ಎತ್ತುಗಳನ್ನು ಅರ್ಧ ಬೆಲೆಗೆ ನೀಡಲು ಸಿದ್ಧವಿದ್ದರೂ, ಖರೀದಿಸಲು ಯಾರೂ ಮುಂದೆ ಬರುತ್ತಿಲ್ಲ ಎಂದು ಹೇಳಿದ್ದಾರೆ.

ಬರಗಾಲದಿಂದ ಬೆಳೆ ನಷ್ಟ, ಒಂದೆಡೆ ಸಾಲದ ಒತ್ತಡ, ಮತ್ತೊಂದೆಡೆ ಎತ್ತುಗಳನ್ನು ಮಾರಾಟ ಮಾಡಿದರೂ ಹಣ ಕೈಗೆ ಸಿಗದ ಪರಿಸ್ಥಿತಿ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಜೀವನೋಪಾಯಕ್ಕೆ ನೆರವಾಗುತ್ತಿದ್ದ ಜೋಡಿ ಎತ್ತುಗಳನ್ನು ಮಾರಾಟ ಮಾಡಿ ಸಾಲ ತೀರಿಸಿಕೊಳ್ಳೋಣ ಎಂದು ಮಾರುಕಟ್ಟೆಗೆ ಬಂದ ರೈತರಿಗೆ ಖರೀದಿದಾರರು ಸಿಗದಿರುವುದು ಅವರ ಸಂಕಷ್ಟವನ್ನು ಇನ್ನಷ್ಟು ಹೆಚ್ಚಿಸಿದೆ.

“ನಮ್ಮ ಗೋಳು ಯಾರಿಗೆ ಹೇಳೋಣ?” ಎಂದು ರೈತರು ಬೇಸರ ವ್ಯಕ್ತಪಡಿಸಿದ್ದು, ಬರಗಾಲದ ಸಂಕಷ್ಟಕ್ಕೆ ಸರ್ಕಾರ ಸೂಕ್ತ ಪರಿಹಾರ ಮತ್ತು ನೆರವು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ShareSendTweetShare
ADVERTISEMENT
Previous Post

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.