ಸಚಿವ ಸತೀಶ್ ಜಾರಕಿಹೊಳಿ ಮೇಲೆ ED ದಾಳಿ: ಹಾವೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಹಾವೇರಿ: ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯದ (ED) ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಆರೋಪಿಸಿ ಹಾವೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಹಾವೇರಿ ನಗರದ ಮೈಲಾರ ಮಹಾದೇವಪ್ಪ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಬಿಜೆಪಿ ಸರ್ಕಾರವು EDಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಈ ವೇಳೆ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸತೀಶ್ ಜಾರಕಿಹೊಳಿ ಅವರು ED ದಾಳಿಯನ್ನು ಸಮರ್ಥವಾಗಿ ಎದುರಿಸಲಿದ್ದಾರೆ. ಬಿಜೆಪಿ ನಡೆಸುತ್ತಿರುವ ಯಾವುದೇ ಷಡ್ಯಂತ್ರ ಯಶಸ್ವಿಯಾಗುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ವ್ಯಂಗ್ಯವಾಡಿದರು.
ಸತೀಶ್ ಜಾರಕಿಹೊಳಿ ಅವರ ಮೇಲಿನ ED ದಾಳಿ ರಾಜಕೀಯ ಪ್ರೇರಿತವಾಗಿದ್ದು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.




