6
  • Latest
ಅಧಿಕಾರಿಗಳು ಜನರ ಸಮಸ್ಯೆ ಆಲಿಸಬೇಕು: ಶಿವಣ್ಣನವರ

ಅಧಿಕಾರಿಗಳು ಜನರ ಸಮಸ್ಯೆ ಆಲಿಸಬೇಕು: ಶಿವಣ್ಣನವರ

ಹಾವೇರಿಯಲ್ಲಿ ಬ್ಯೂಟಿಷಿಯನ್ ತರಬೇತಿ: ಅರ್ಜಿ ಆಹ್ವಾನ

ಹಾವೇರಿಯಲ್ಲಿ ಬ್ಯೂಟಿಷಿಯನ್ ತರಬೇತಿ: ಅರ್ಜಿ ಆಹ್ವಾನ

ED–CBI ದಾಳಿ ರಾಜಕೀಯ ಪ್ರೇರಿತವಲ್ಲ: ಕಾರಜೋಳ

ED–CBI ದಾಳಿ ರಾಜಕೀಯ ಪ್ರೇರಿತವಲ್ಲ: ಕಾರಜೋಳ

ಮೋಡ ಬಿತ್ತನೆ ಬಗ್ಗೆ ಬೊಮ್ಮಾಯಿ ಟಾಂಗ್!

ಮೋಡ ಬಿತ್ತನೆ ಬಗ್ಗೆ ಬೊಮ್ಮಾಯಿ ಟಾಂಗ್!

ADVERTISEMENT
  • Home
Saturday, September 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ರಾಜಕೀಯ

ಅಧಿಕಾರಿಗಳು ಜನರ ಸಮಸ್ಯೆ ಆಲಿಸಬೇಕು: ಶಿವಣ್ಣನವರ

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರವೇ ಪ್ರಜಾಸೇವೆಯ ಉದ್ದೇಶ: ಬಸವರಾಜ ಶಿವಣ್ಣನವರ

Kiran Reporter Haveri by Kiran Reporter Haveri
September 12, 2026
in ರಾಜಕೀಯ, ರಾಜ್ಯ, ಸ್ಥಳೀಯ
advt advt advt
ADVERTISEMENT

ಬ್ಯಾಡಗಿ, ಸೆ.12: ಜನಸಾಮಾನ್ಯರ ಬಹುದಿನಗಳ ಬೇಡಿಕೆಗಳು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಆಲಿಸಿ, ಕಾನೂನು ಚೌಕಟ್ಟಿನೊಳಗೆ ತ್ವರಿತವಾಗಿ ಪರಿಹಾರ ಒದಗಿಸುವ ಉದ್ದೇಶದಿಂದ ‘ಪ್ರಜಾಸೇವೆ’ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಸವರಾಜ ಶಿವಣ್ಣನವರ ಹೇಳಿದರು.

ADVERTISEMENT

ಬ್ಯಾಡಗಿ ಪಟ್ಟಣದ ಶ್ರೀ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ‘ಪ್ರಜಾಸೇವಾ ಆಂದೋಲನ’ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ADVERTISEMENT
ADVERTISEMENT

ಪ್ರತಿ ಹೋಬಳಿ ಹಾಗೂ ತಾಲೂಕು ಮಟ್ಟದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಪ್ರಜಾಸೇವೆ ಕಾರ್ಯಕ್ರಮ ರೂಪಿಸಲಾಗಿದೆ. ಸಾರ್ವಜನಿಕರು ಸಮಸ್ಯೆಗಳ ಕುರಿತು ಅರ್ಜಿ ಸಲ್ಲಿಸಿದಾಗ ಸಂಬಂಧಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ಕಾನೂನು ವ್ಯಾಪ್ತಿಯಲ್ಲಿ ಸಮಸ್ಯೆ ಪರಿಹರಿಸಲು ಸಾಧ್ಯವಾಗದಿದ್ದರೆ, ಅದಕ್ಕೆ ಸೂಕ್ತ ಕಾರಣವನ್ನು ಅರ್ಜಿದಾರರಿಗೆ ಸ್ಥಳದಲ್ಲಿಯೇ ತಿಳಿಸಬೇಕು ಎಂದು ಸೂಚಿಸಿದರು.

Advertisement. Scroll to continue reading.
Advertisement. Scroll to continue reading.

ಸಣ್ಣಪುಟ್ಟ ಸಮಸ್ಯೆಗಳಿಗೂ ಸಾರ್ವಜನಿಕರು ತಿಂಗಳುಗಟ್ಟಲೆ ತಾಲೂಕು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಅದರಲ್ಲೂ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಪರಿಶೀಲಿಸಿ, ತಮ್ಮ ವ್ಯಾಪ್ತಿಯಲ್ಲಿ ಸಾಧ್ಯವಿರುವ ಪರಿಹಾರವನ್ನು ತ್ವರಿತವಾಗಿ ಒದಗಿಸಬೇಕು ಎಂದು ಬಸವರಾಜ ಶಿವಣ್ಣನವರ ಹೇಳಿದರು.

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನಸಾಮಾನ್ಯರಿಂದಲೇ ಬಂದವರು. ಅಧಿಕಾರಿಗಳು ತಮ್ಮ ಶಿಕ್ಷಣ ಹಾಗೂ ಅರ್ಹತೆಯ ಆಧಾರದ ಮೇಲೆ ಸರ್ಕಾರಿ ಸೇವೆಗೆ ಆಯ್ಕೆಯಾಗಿದ್ದು, ಜನರ ಸೇವೆ ಮಾಡುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಬಡವರು ಹಾಗೂ ಧ್ವನಿಯಿಲ್ಲದ ಜನರ ಸಮಸ್ಯೆಗಳನ್ನು ಸಹಾನುಭೂತಿಯಿಂದ ಆಲಿಸಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದಾಗ ಮಾತ್ರ ಸರ್ಕಾರಿ ಸೇವೆಗೆ ಬಂದಿರುವುದು ಸಾರ್ಥಕವಾಗುತ್ತದೆ ಎಂದರು.

ಅಧಿಕಾರಿಗಳು ಸಾರ್ವಜನಿಕರೊಂದಿಗೆ ಮಾನವೀಯತೆಯಿಂದ ನಡೆದುಕೊಳ್ಳಬೇಕು. ಅರ್ಜಿಯನ್ನು ಪರಿಶೀಲಿಸದೇ ಅಥವಾ ಸಮಸ್ಯೆಯನ್ನು ಆಲಿಸದೇ ಸಾರ್ವಜನಿಕರನ್ನು ಹಿಂದಕ್ಕೆ ಕಳುಹಿಸುವ ಮನೋಭಾವವನ್ನು ಕೈಬಿಡಬೇಕು. ಜನರ ಸಮಸ್ಯೆಗಳನ್ನು ತಮ್ಮದೇ ಸಮಸ್ಯೆಗಳೆಂದು ಪರಿಗಣಿಸಿ ಸ್ಪಂದಿಸುವ ಮೂಲಕ ಉತ್ತಮ ಆಡಳಿತ ನೀಡಬೇಕು ಎಂದು ಅವರು ಹೇಳಿದರು.

Advertisement. Scroll to continue reading.

ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ್ ಅವರು ಸಾಮಾನ್ಯ ಜನರು ಕಚೇರಿಗೆ ಬಂದಾಗಲೂ ಅವರ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸುವ ಉತ್ತಮ ಅಧಿಕಾರಿ ಎಂದು ಬಸವರಾಜ ಶಿವಣ್ಣನವರ ಪ್ರಶಂಸಿಸಿದರು. ಜಿಲ್ಲೆ, ತಾಲೂಕು ಹಾಗೂ ರಾಜ್ಯಕ್ಕೆ ಇಂತಹ ಜನಪರ ಮನೋಭಾವದ ಅಧಿಕಾರಿಗಳ ಅಗತ್ಯವಿದೆ ಎಂದರು.

ಜನರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ದೊರೆತರೆ, ಅವರು ತಮ್ಮ ಉದ್ಯೋಗ, ಕೃಷಿ ಹಾಗೂ ದೈನಂದಿನ ಚಟುವಟಿಕೆಗಳಲ್ಲಿ ನೆಮ್ಮದಿಯಿಂದ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಈ ಮೂಲಕ ಸಾರ್ವಜನಿಕರ ಅರ್ಜಿಗಳ ಸಂಖ್ಯೆ ಕಡಿಮೆಯಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ.

ಪ್ರಜಾಸೇವೆ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಮೂಲಕ ಮುಖ್ಯಮಂತ್ರಿ ಅವರ ಜನಪರ ಕನಸನ್ನು ಸಾಕಾರಗೊಳಿಸಬೇಕು ಎಂದು ಬಸವರಾಜ ಶಿವಣ್ಣನವರ ಹೇಳಿದರು.

Tags: #ಪ್ರಜಾಸೇವೆ #ಬ್ಯಾಡಗಿ #ಹಾವೇರಿ #ಹಾವೇರಿಸುದ್ದಿ #ಬಸವರಾಜಶಿವಣ್ಣನವರ #Haveri #Byadagi #HaveriNews #ShreeKarnataka #KarnatakaNews #BreakingNews #PublicService #PrajaSeve
ShareSendTweetShare
ADVERTISEMENT
Previous Post

ED–CBI ದಾಳಿ ರಾಜಕೀಯ ಪ್ರೇರಿತವಲ್ಲ: ಕಾರಜೋಳ

Next Post

ಹಾವೇರಿಯಲ್ಲಿ ಬ್ಯೂಟಿಷಿಯನ್ ತರಬೇತಿ: ಅರ್ಜಿ ಆಹ್ವಾನ

Next Post
ಹಾವೇರಿಯಲ್ಲಿ ಬ್ಯೂಟಿಷಿಯನ್ ತರಬೇತಿ: ಅರ್ಜಿ ಆಹ್ವಾನ

ಹಾವೇರಿಯಲ್ಲಿ ಬ್ಯೂಟಿಷಿಯನ್ ತರಬೇತಿ: ಅರ್ಜಿ ಆಹ್ವಾನ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.