ಹಿರೇಕೇರೂರು: ಹಿರೇಕೇರೂರು ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡದಿರುವ ಕುರಿತು ಸಾರ್ವಜನಿಕರಲ್ಲಿ ಇರುವ ಅಸಮಾಧಾನದ ಬಗ್ಗೆ ಸಚಿವ ರುದ್ರಪ್ಪ ಲಮಾಣಿ ಪ್ರತಿಕ್ರಿಯಿಸಿದ್ದಾರೆ.
ಎಲ್ಲಾ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಆದರೆ ಹಿರೇಕೇರೂರು ತಾಲೂಕು ಬರಪೀಡಿತ ಎಂದು ಘೋಷಣೆಯಾಗಿಲ್ಲ ಎಂಬ ಕೊರತೆ ಜನರಲ್ಲಿ ಇದೆ. ಕೇಂದ್ರ ಸರ್ಕಾರದ ಬರ ಘೋಷಣೆ ಮಾನದಂಡಗಳ ಪ್ರಕಾರ ವಾರದಲ್ಲಿ ಮೂರು ದಿನ ಮಳೆ ಆಗದಿದ್ದರೆ ಬರ ಎಂದು ಘೋಷಣೆ ಮಾಡುವ ಅವಕಾಶವಿದೆ. ಸರ್ಕಾರ ನಿಗದಿಪಡಿಸಿರುವ ಮಾನದಂಡಗಳ ಆಧಾರದ ಮೇಲೆ ಬರ ಘೋಷಣೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.




