6
  • Latest

ವರಸೆ ಬದಲಿಸಿದ ಅರಣ್ಯಾಧಿಕಾರಿ: ಕಾನೂನಿಗೂ ಇಲ್ಲ ಕಿಮ್ಮತ್ತು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ವರಸೆ ಬದಲಿಸಿದ ಅರಣ್ಯಾಧಿಕಾರಿ: ಕಾನೂನಿಗೂ ಇಲ್ಲ ಕಿಮ್ಮತ್ತು

ಅತಿಕ್ರಮಣದಾರರಿಗೆ ಆತಂಕ | ರವೀಂದ್ರ ನಾಯ್ಕ ಖಂಡನೆ |

AchyutKumar by AchyutKumar
July 1, 2024
in ರಾಜ್ಯ
advt advt advt
ADVERTISEMENT

ಅನಾಧಿಕಾಲದಿoದಲೂ ಅರಣ್ಯಭೂಮಿ ಸಾಗುವಳಿ ಮಾಡಿಕೊಂಡು ಬಂದಿರುವ ಅತಿಕ್ರಮಣದಾರರನ್ನು ಅರಣ್ಯ ಇಲಾಖೆ ಒಕ್ಕಲೆಬ್ಬಿಸುವ ಕೆಲಸ ಮುಂದುವರೆಸಿದೆ. `ಅತಿಕ್ರಮಣದಾರರಿಗೆ ತೊಂದರೆ ಕೊಡುವುದಿಲ್ಲ’ ಎಂದು ಭರವಸೆ ನೀಡಿದ ಅಧಿಕಾರಿಗಳು ಇದೀಗ ತಮ್ಮ ವರಸೆ ಬದಲಿಸಿದ್ದಾರೆ.
ಮೊನ್ನೆ ಶಿರಸಿಯಲ್ಲಿ ನಡೆದ ಸಭೆಯಲ್ಲಿ ಅರಣ್ಯಾಧಿಕಾರಿಗಳು `ಹಳೆಯ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವುದಿಲ್ಲ’ ಎಂದು ಪ್ರಮಾಣ ಮಾಡಿದ್ದರು. ಆದರೆ, ಅದಾದ ಮೂರೇ ದಿನದಲ್ಲಿ ಸಿದ್ದಾಪುರದಲ್ಲಿನ ಬಡ ಕುಟುಂಬದ ಮೇಲೆ ತಮ್ಮ ಅಸ್ತ್ರ ಪ್ರಯೋಗಿಸಿದ್ದಾರೆ. ಅರಣ್ಯ ಹಕ್ಕು ಕಾಯ್ದೆ ಅಡಿ ಅರ್ಜಿ ಸಲ್ಲಿಸಿದವರಿಗೆ ಇದೀಗ ನೋಟಿಸ್ ನೀಡಿದ್ದು, ಅರ್ಜಿ ಮಂಜೂರಾತಿ ಹಂತದಲ್ಲಿರುವಾಗ ತಡೆ ಒಡ್ಡುವ ಪ್ರಯತ್ನ ನಡೆದಿದೆ.

ಆತಂಕದಲ್ಲಿರುವ ಇನ್ನೊಂದು ಕುಟುಂಬ

ಸಿದ್ದಾಪುರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಿಂದ ಕ್ಯಾದಗಿಯ ಬಿಳೂಮನೆ ಕನ್ಯಾ ಪುಟ್ಟ ನಾಯ್ಕ ಹಾಗೂ ಕನ್ನಾ ಮಾರ್ಯ ನಾಯ್ಕ ಅವರಿಗೆ ಒಕ್ಕಲೆಬ್ಬಿಸುವ ಪ್ರಕ್ರಿಯೆಯ ನೋಟಿಸ್ ಬಂದಿದೆ. `ಅರಣ್ಯ ಹಕ್ಕು ಕಾಯ್ದೆ ಅಡಿ ಅರ್ಜಿ ಸಲ್ಲಿಸಿರುವವರಿಗೆ ಪರಿಶೀಲನಾ ಪ್ರಕ್ರಿಯೆ ಪೂರ್ಣ ಆಗುವವರೆಗೂ ಒಕ್ಕಲೆಬ್ಬಿಸುವ ಅಧಿಕಾರ ಈ ಅಧಿಕಾರಿಗಳಿಗೆ ಇಲ್ಲ. ಈ ಬಗ್ಗೆ ಕಾನೂನು ಸ್ಪಷ್ಟವಾಗಿ ತಿಳಿಸಿದ್ದರೂ ಅದನ್ನು ಅಧಿಕಾರಿಗಳು ಉಲ್ಲಂಗಿಸಿದ್ದಾರೆ’ ಎಂದು ನ್ಯಾಯವಾದಿ ರವೀಂದ್ರ ನಾಯ್ಕ ಆಕ್ಷೇಪಿಸಿದರು.

Advertisement. Scroll to continue reading.
ADVERTISEMENT
ADVERTISEMENT
ನ್ಯಾಯವಾದಿ ರವೀಂದ್ರ ನಾಯ್ಕ

`ರೈತರನ್ನು ಮಾನಸಿಕವಾಗಿ ಕುಗ್ಗಿಸುವುದಕ್ಕಾಗಿ ಅರಣ್ಯ ಇಲಾಖೆ ಈ ರೀತಿ ನೋಟಿಸ್ ನೀಡುತ್ತಿದೆ. 35 ವರ್ಷದ ತೆಂಗು, ಅಡಿಕೆ ಮರಗಳು ಕ್ಷೇತ್ರದಲ್ಲಿದ್ದು ಭತ್ತ ಬೇಸಾಯ ಮಾಡುವ ಬಡವರಿಗೆ ಅನ್ಯಾಯವಾಗುತ್ತಿದೆ’ ಎಂದವರು ದೂರಿದರು.

Advertisement. Scroll to continue reading.

ತಿಮ್ಮಪ್ಪರ ಆದೇಶಕ್ಕೆ ಇಲ್ಲ ಬೆಲೆ
`ಅರಣ್ಯವಾಸಿಯ ಒಟ್ಟು ಸಾಗುವಳಿ ಕ್ಷೇತ್ರ 3 ಎಕರೆಗಿಂತ ಕಡಿಮೆ ಇದ್ದರೆ ಅಂಥ ಒತ್ತುವರಿದಾರರನ್ನು ಒಕ್ಕಲೆಬ್ಬಿಸುವ ಹಾಗಿಲ್ಲ’ ಎಂದು ವಿಧಾನಸಭಾ ಅಧ್ಯಕ್ಷರಾಗಿದ್ದ ಕಾಗೋಡು ತಿಮ್ಮಪ್ಪ ಅವರು ಆದೇಶಿಸಿದ್ದರು. ಆದರೆ, ಅರಣ್ಯ ಅಧಿಕಾರಿಗಳು ಈ ಆದೇಶಕ್ಕೆ ಬೆಲೆ ಕೊಡುತ್ತಿಲ್ಲ. `ಸರ್ಕಾರದ ಆದೇಶವನ್ನು ಉಲ್ಲಂಗಿಸುತ್ತಿರುವ ಅರಣ್ಯಾಧಿಕಾರಿಗಳ ನಡೆ ಖಂಡನೀಯ’ ಎಂದು ರವೀಂದ್ರ ನಾಯ್ಕ ಆಕ್ರೋಶ ವ್ಯಕ್ತಪಡಿಸಿದರು.

ShareSendTweetShare
ADVERTISEMENT
Previous Post

ಕನ್ನಡನಾಡಿನಲ್ಲಿ ಕನ್ನಡಿಗರಿಗೆ ಅನ್ಯಾಯ: ಉದ್ಯೋಗ ಆದ್ಯತೆಗೆ ಕರವೇ ಆಗ್ರಹ

Next Post

ವೈದ್ಯಕೀಯ ಸೇವೆಯಲ್ಲಿ ಸಾಧನೆ: ಡಾ ನೀರಜ್’ಗೆ ಪ್ರಶಸ್ತಿ

Next Post

ವೈದ್ಯಕೀಯ ಸೇವೆಯಲ್ಲಿ ಸಾಧನೆ: ಡಾ ನೀರಜ್'ಗೆ ಪ್ರಶಸ್ತಿ

ಶಿರಸಿಯ ಶೃತಿ ಇದೀಗ ಸೌಂದರ್ಯ ದೇವತೆ!

ಶಿರಸಿಯ ಶೃತಿ ಇದೀಗ ಸೌಂದರ್ಯ ದೇವತೆ!

ಆಸ್ಪತ್ರೆ ಮುಂದೆ ಅಪಘಾತ: ಮಹಿಳೆಗೆ ಗಾಯ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.