ಅಂಕೋಲಾ: ಕೇಣಿಯ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಸುಧೀರ ದೇವಣ್ಣ ನಾಯಕ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ `ರಾಜ್ಯ ಪರಿಸರ ಪ್ರಶಸ್ತಿ’ ಪ್ರಧಾನ ಮಾಡಿದ್ದಾರೆ.
ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದು, ಕನಕ ಹಾಗೂ ಸನ್ಮಾನ ಪತ್ರಗಳನ್ನು ಒಳಗೊಂಡಿದೆ. ಅರಣ್ಯ ಜೀವ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿ0ದ ಪರಿಸರ ಪೂರಕವಾದ ವಿಶೇಷ ಕಾರ್ಯ ಚಟುವಟಿಕೆಗಳನ್ನು ಕೈಗೊಂಡ ರಾಜ್ಯದ ಮೂವರು ಶಿಕ್ಷಕರಿಗೆ ಈ ಪ್ರಶಸ್ತಿ ದೊರೆತಿದೆ. ಯಲ್ಲಾಪುರ ತಾಲೂಕಿನ ಬಿಸಗೋಡು, ಅಂಕೋಲಾ ತಾಲೂಕಿನ ಹಿಲ್ಲೂರಿನಲ್ಲಿ ಸಹ ಸುಧೀರ್ ನಾಯಕ ಶಿಕ್ಷಕರಾಗಿದ್ದರು.





Discussion about this post