ಸಿದ್ದಾಪುರ: ಅನಾಥರು ಹಾಗೂ ನಿರ್ಗತಿಕರನ್ನು ಸಲಹುತ್ತಿರುವ ಮುಗದೂರಿನ ಪುನೀತ್ ರಾಜಕುಮಾರ ಆಶ್ರಯಧಾಮದಲ್ಲಿ ಜುಲೈ 18ರಂದು `ಮಂತ್ರ ಮಾಂಗಲ್ಯ’ ವಿವಾಹ ಮಹೋತ್ಸವ ನಡೆಯಲಿದೆ.
ಆಶ್ರಮದ ಮುಖ್ಯಸ್ಥ ನಾಗರಾಜ ನಾಯ್ಕ ಈ ಬಗ್ಗೆ ಮಾಹಿತಿ ನೀಡಿದ್ದು, `ಕಳೆದ 10 ವರ್ಷಗಳಿಂದ ಅನಾಥಾಶ್ರಮ ನಡೆಯುತ್ತಿದೆ. ಪ್ರಸ್ತುತ ಅನಾರೋಗ್ಯ ಪೀಡಿತರಾಗಿ ಆಶ್ರಮದಲ್ಲಿ ಆಶ್ರಯ ಪಡೆದಿದ್ದ ಹೊನ್ನವಾರದ ದಿವ್ಯಾ ಹಾಗೂ ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಈರಣ್ಣ ಗುಣಮುಖರಾಗಿದ್ದು, ಅವರಿಬ್ಬರು ಪ್ರೀತಿಯಲ್ಲಿದ್ದಾರೆ. ಹೀಗಾಗಿ ಕುವೆಂಪು ಆಶಯದಂತೆ ಮಂತ್ರ ಮಾಂಗಲ್ಯ ಏರ್ಪಡಿಸಲಾಗಿದೆ’ ಎಂದರು.





Discussion about this post