6
  • Latest

ಭೂ ಕುಸಿತ: ತಜ್ಞರ ವರದಿ ನಿರ್ಲಕ್ಷಿಸಿದ್ದ ಸರ್ಕಾರ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಭೂ ಕುಸಿತ: ತಜ್ಞರ ವರದಿ ನಿರ್ಲಕ್ಷಿಸಿದ್ದ ಸರ್ಕಾರ!

AchyutKumar by AchyutKumar
in ದೇಶ - ವಿದೇಶ

ಪಶ್ಚಿಮಘಟ್ಟ ಹಾಗೂ ಕರಾವಳಿ ಪ್ರದೇಶದಲ್ಲಿನ ಭೂ ಕುಸಿತದ ಬಗ್ಗೆ ತಜ್ಞರು 2021ರ ಫೆಬ್ರವರಿಯಲ್ಲಿಯೇ ಅಧ್ಯಯನ ವರದಿಯನ್ನು ನೀಡಿದ್ದರು. ಆದರೂ, ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿದ ಕಾರಣ ಭೂ ಕುಸಿತದ ಅವಾಂತರಗಳು ಮುಂದುವರೆದಿದೆ.

ADVERTISEMENT

2019ರಲ್ಲಿ ಕಾರವಾರದ ಕಡವಾಡದಲ್ಲಿ ದೊಡ್ಡ ಪ್ರಮಾಣದಲ್ಲಿ ಭೂ ಕುಸಿತವಾಗಿತ್ತು. ಆಗ ಜೀವ ವೈವಿಧ್ಯ ಮಂಡಳಿಯವರು ಈ ಬಗ್ಗೆ ಅಧ್ಯಯನ ನಡೆಯಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದರು. ಅದರ ಪ್ರಕಾರ ಕರ್ನಾಟಕ ಸರ್ಕಾರದ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಿಂದ ಭೂ ಕುಸಿತ ಅಧ್ಯಯನ ಸಮಿತಿ ರಚಿಸಿ ಅಧ್ಯಯನ ನಡೆಸಿತ್ತು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಭೂ ಕುಸಿತ ಪ್ರದೇಶಗಳನ್ನು ಗುರುತಿಸಿ, ಭೂ ಕುಸಿತ ತಡೆಗೆ ಕೈಗೊಳ್ಳಬೇಕಾದ ತುರ್ತು ಕೆಲಸಗಳ ಬಗ್ಗೆ ಅದರಲ್ಲಿ ತಜ್ಞರು ವಿವರಿಸಿದ್ದರು. ಆದರೆ, ಮೂರುವರೆ ವರ್ಷ ಕಳೆದರೂ ತಜ್ಞರು ನೀಡಿದ ಸಲಹೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿರಲಿಲ್ಲ. ಇದರ ಪರಿಣಾಮವಾಗಿ ಭೂ ಕುಸಿತ ಮುಂದುವರೆದಿದ್ದು, ಇನ್ನಷ್ಟು ಜೀವಗಳು ಬಲಿಯಾಗಿದೆ. ಅನೇಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ.

ಮಳೆಗಾಲದ ಅವಧಿಯಲ್ಲಿ ಭೂ ಕುಸಿತ ತಡೆ ದೊಡ್ಡ ಸವಾಲಾಗಿದ್ದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಸಿದ್ದಾಪುರ, ಯಲ್ಲಾಪುರ, ಹಾಗೂ ಜೊಯಿಡಾದಲ್ಲಿ ಭೂ ಕುಸಿತದ ಪ್ರಮಾಣ ಜಾಸ್ತಿಯಿರುವ ಬಗ್ಗೆ ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ. `ಕಾಡು ನಾಶ, ಬಸಿಗಾಲುವೆಗಳ ವಿನಾಶ, ಗಣಿಗಾರಿಕೆ, ಇಳಿಜಾರುಗಳನ್ನು ತುಂಡರಿಸಿರುವುದು, ಅರಣ್ಯಭೂಮಿ ಅನ್ಯ ಉದ್ದೇಶಕ್ಕೆ ಬಳಕೆ ಮಾಡುತ್ತಿರುವುದು ಸಹ ಭೂ ಕುಸಿತಕ್ಕೆ ಮುಖ್ಯ ಕಾರಣ’ ಎಂದು ವರದಿಯಲ್ಲಿ ಬರೆಯಲಾಗಿದೆ. ಕೇಂದ್ರ ಸರ್ಕಾರದ `ಲ್ಯಾಂಡ್ ಸ್ಲಿಪ್’ ಯೋಜನೆಯನ್ನು ಇಲ್ಲಿಗೂ ವಿಸ್ತರಿಸುವ ಬಗ್ಗೆ ವರದಿ ಹಕ್ಕೊತ್ತಾಯ ಮಾಡಿದೆ. `ಸಮಗ್ರ ಭೂ ಕುಸಿತ ನಿಯಂತ್ರಣ ಮಾರ್ಗೋಪಾಯ ಕಾರ್ಯಯೋಜನೆ’ ಸಿದ್ಧಪಡಿಸಲು ವರದಿಯಲ್ಲಿ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಇಸ್ರೋ ವಿಜ್ಞಾನಿಗಳು, ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರದವರು ಈ ಸಮಿತಿಯಲ್ಲಿದ್ದರು. ಪಶ್ಚಿಮ ಕಾರ್ಯಪಡೆಯ ಅನಂತ ಅಶೀಸರ ಸಮಿತಿ ಅಧ್ಯಕ್ಷರಾಗಿದ್ದು, ಸಂರಕ್ಷಣಾ ಜೀವಶಾಸ್ತ್ರಜ್ಞ ಡಾ ಕೇಶವ ಕೂರ್ಸೆ, ಪರಿಸರ  ಶಾಸ್ತ್ರಜ್ಞ ಡಾ ಟಿ ವಿ ರಾಮಚಂದ್ರ, ಜಿಯಾಲಾಜಿಕ್ ಸರ್ವೆ ಆಫ್ ಇಂಡಿಯಾದ ವಿಜ್ಞಾನಿ ಡಾ ಮಾರುತಿ, ಭೂ ವಿಜ್ಞಾನಿ ಡಾ ಶ್ರೀನಿವಾಸ ರೆಡ್ಡಿ ತಜ್ಞ ಸದಸ್ಯರಾಗಿ ಓಡಾಟ ನಡೆಸಿದ್ದರು. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಕಂದಾಯ, ಗಣಿ, ಭೂ ಗರ್ಭ ಶಾಸ್ತ್ರಇಲಾಖೆಯ ಅಧಿಕಾರಿಗಳನ್ನು ಸಮಿತಿಗೆ ಸೇರಿಸಿಕೊಂಡು ಅಧ್ಯಯನ ನಡೆಸಲಾಗಿತ್ತು. ಜನರ ಅಹವಾಲು, ನೊಂದವರ ಹೇಳಿಕೆ, ಪರಿಹಾರದ ಕಾರ್ಯಸೂಚಿಗಳ ಪಟ್ಟಿಯನ್ನು ಸಿದ್ಧಪಡಿಸಿದ ಸಮಿತಿ ಈ ಬಗ್ಗೆ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಿತ್ತು.

Advertisement. Scroll to continue reading.
Advertisement. Scroll to continue reading.
Previous Post

ನೆರೆ ಪ್ರವಾಹ: ಐಷಾರಾಮಿ ಕಾರು ಬಿಟ್ಟು ಲಾರಿ ಏರಿದ ಉನ್ನತ ಅಧಿಕಾರಿಗಳು!

Next Post

ಶ್ರೀರಾಮ ನಿರ್ಯಾಣದೊಂದಿಗೆ ಸರಣಿಗೆ ಮಹಾ ಮಂಗಲ

Next Post

ಶ್ರೀರಾಮ ನಿರ್ಯಾಣದೊಂದಿಗೆ ಸರಣಿಗೆ ಮಹಾ ಮಂಗಲ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ