ಕುಮಟಾ: `ಹಿಂದಿನ ಪೀಳಿಗೆಯ ಶ್ರೇಷ್ಠತೆಯನ್ನು ಮುಂದಿನ ಪೀಳಿಗೆಗೆ ಒಯ್ಯುವ ಜತೆಗೆ ಅದನ್ನು ವರ್ಧಿಸಿ ಮತ್ತಷ್ಟು ಶ್ರೇಷ್ಠವಾಗಿಸುವುದೇ ಪರಂಪರೆ. ಹಿಂದಿನ ಎಲ್ಲ ಒಳಿತುಗಳು ಮುಂದಿನ ಪೀಳಿಗೆಗೆ ತಲುಪಿದಾಗ ಅದು ಮತ್ತಷ್ಟು ಶ್ರೇಷ್ಠವಾಗುತ್ತದೆ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದರು.
ಗೋಕರ್ಣದ ಅಶೋಕೆಯಲ್ಲಿ ಹವ್ಯಕ ಮಹಾಮಂಡಲ ಟ್ರಸ್ಟ್ ಆಶ್ರಯದಲ್ಲಿ ನಡೆಯುತ್ತಿರುವ ಪರಂಪರಾ ಗುರುಕುಲದ ವರ್ಧಂತಿ ಉತ್ಸವದ ಸಾನ್ನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು. `ಮೌಲ್ಯಗಳು ಒಂದು ತಲೆಮಾರಿನಿಂದ ಮತ್ತೊಂದು ತಲೆಮಾರಿಗೆ ದಾಟಬೇಕು. ಶ್ರೇಷ್ಠತೆಯನ್ನು ಮುಂದುವರಿಸುವ ಸರಣಿಯೇ ನಿಜ ಅರ್ಥದಲ್ಲಿ ಪರಂಪರೆ. ಪ್ರತಿ ಜಾತಿ, ಧರ್ಮಗಳ ಪರಂಪರೆ ಮುಂದುವರಿಯಬೇಕು’ ಎಂದು ಆಶಿಸಿದರು.
`ಪದವೀಧರರನ್ನು ಉತ್ಪಾದಿಸುವ ಕಾರ್ಖಾನೆಗಳಾಗಿರುವ ಇಂದಿನ ಶಿಕ್ಷಣ ವ್ಯವಸ್ಥೆ ಪರಂಪರೆಯನ್ನು ಬೆಳೆಸುವ ಕಾರ್ಯ ಮಾಡುತ್ತಿಲ್ಲ. ಈ ಕೊರತೆಯನ್ನು ನೀಗಿಸುವ ಪ್ರಯತ್ನವೇ ಪರಂಪರಾ ಗುರುಕುಲದ ಪರಿಕಲ್ಪನೆ. ನಮ್ಮ ಪರಂಪರೆಯನ್ನು ಕಾಪಾಡಿಕೊಳ್ಳದಿದ್ದರೆ ಮುಂದೊAದು ದಿನ ಅತಂತ್ರಭಾವ ನಮ್ಮನ್ನು ಕಾಡುತ್ತದೆ’ ಎಂದು ಎಚ್ಚರಿಸಿದರು.





Discussion about this post