ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದ ಮಳೆ ಮುಂದುವರೆದಿದ್ದು, ಶಾಲಾ ಕಾಲೇಜುಗಳಿಗೆ ಘೋಷಿಸಿದ್ದ ರಜೆಯನ್ನು ಜುಲೈ 20ಕ್ಕೂ ಮುಂದುವರೆಸಲಾಗಿದೆ. ಮಳೆ ಕಾರಣ ಜುಲೈ 21ರವರೆಗೂ ಜಿಲ್ಲೆಯಲ್ಲಿ ರೆಡ್ ಅಲರ್ಟ ಘೋಷಿಸಲಾಗಿದೆ.
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೊಯಿಡಾ, ಹಳಿಯಾಳ, ಮುಂಡಗೋಡು ಹಾಗೂ ದಾಂಡೇಲಿ ಭಾಗದ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಹಾಗೂ ಐಟಿಐ ಕಾಲೇಜುಗಳಿಗೆ ಈ ರಜೆ ಘೋಷಣೆಯಾಗಿದೆ. ಈಗ ನೀಡಿರುವ ರಜೆಯ ಬದಲು ಬೇಸಿಗೆಯಲ್ಲಿ ಹೆಚ್ಚುವರಿಯಾಗಿ ತರಗತಿ ನಡೆಸಬೇಕು ಎಂದು ಸೂಚಿಸಲಾಗಿದೆ. ಮಕ್ಕಳ ವಿದ್ಯಾಬ್ಯಾಸಕ್ಕೆ ಯಾವುದೇ ಹಿನ್ನಡೆ ಆಗದಂತೆ ಕ್ರಮ ಜರುಗಿಸಲು ಶಿಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಮಕ್ಕಳ ಸುರಕ್ಷತೆಗಾಗಿ ರಜೆ ಮುಂದುವರೆಸುವ ಬಗ್ಗೆ ಶಿಕ್ಷಣಾಧಿಕಾರಿಗಳು ಜಿಲ್ಲಾಡಳಿತಕ್ಕೆ ವಿವರಿಸಿದ್ದರು.






Discussion about this post