ಮುಂಡಗೊಡ: ಅನಾದಿಕಾಲದಿಂದಲೂ ಅರಣ್ಯ ಭೂಮಿಯನ್ನು ಸಾಗುವಳಿ ಮಾಡುತ್ತಿರುವ ನಾಗನೂರ ಗ್ರಾಮದ ಅರಣ್ಯವಾಸಿಯಗಳ ಮೇಲೆ ಅರಣ್ಯ ಸಿಬ್ಬಂದಿ ದಬ್ಬಾಳಿಕೆ ನಡೆಸಿದ್ದಾರೆ. `ದೌರ್ಜನ್ಯ ನಡೆಸಿದ ಸಿಬ್ಬಂದಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ.
`1976ನೇ ಸಾಲಿನಿಂದ ದೌರ್ಜನ್ಯಕ್ಕೆ ಒಳಗಾದ ಅರಣ್ಯವಾಸಿಯ ಕುಟುಂಬವು ನಾಗನೂರ ಗ್ರಾಮದಲ್ಲಿ 4 ಎಕರೆ ಕ್ಷೇತ್ರದ ಭೂಮಿಯಲ್ಲಿ ಅಲ್ಪಾವಧಿ ಕೃಷಿ ಚಟುವಟಿಕೆ ನಡೆಸುತ್ತಿದ್ದು, ಅಲ್ಲಿನವರು ಅರಣ್ಯ ಹಕ್ಕು ಕಾಯಿದೆಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯು ಅರಣ್ಯ ಹಕ್ಕು ಸಮಿತಿಯಲ್ಲಿ ಪರಿಶೀಲನೆ ಹಂತದಲ್ಲಿದೆ. ಅದಾಗಿಯೂ ಅರಣ್ಯ ಸಿಬ್ಬಂದಿ ಅಲ್ಲಿ ತೆರಳಿ ದಬ್ಬಾಳಿಕೆ ನಡೆಸಿದ್ದಾರೆ’ ಎಂದು ಸಂತ್ರಸ್ತರು ರವೀಂದ್ರರ ಬಳಿ ನೋವು ಹಂಚಿಕೊoಡರು.
ಕಾನೂನು ಉಲ್ಲಂಘನೆ:
ಕಾನೂನು ವ್ಯಾಪ್ತಿಗೆ ಮೀರಿ ಕಾನೂನು ವಿಧಿವಿಧಾನ ಅನುಸರಿಸದೇ ಬಡ ಅರಣ್ಯವಾಸಿ ಕುಟುಂಬಗಳ ಮೇಲೆ ದೌರ್ಜನ್ಯ ನಡೆಸಿದೆ. ಈ ಅರಣ್ಯ ಸಿಬ್ಬಂದಿ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ರವೀಂದ್ರ ನಾಯ್ಕ ಅವರು ಹಿರಿಯ ಅರಣ್ಯಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ನ್ಯಾಯವಾದಿ ರವೀಂದ್ರ ನಾಯ್ಕ ಅತಿಕ್ರಮಣದಾರರ ಪ್ರದೇಶಕ್ಕೆ ಭೇಟಿ ನೀಡಿದ ವಿಡಿಯೋ ಇಲ್ಲಿ ನೋಡಿ..






Discussion about this post