`ಗೃಂಥಗಳು ಜನಸಾಮಾನ್ಯರ ಬದುಕಿಗೆ ದಾರೀದೀಪಗಳಾಗಿದೆ’ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.
ಅಶೋಕೆಯ ವಿವಿವಿ ಆವರಣದಲ್ಲಿ ಅನಾವರಣ ಚಾತುಮಾಸ್ಯದ ಎರಡನೇ ದಿನ ಗುರುಗ್ರಂಥ ಮಾಲಿಕೆಯ ಅನಾವರಣ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಅವರು, `ವಿರಾಟ್ ವಿಶ್ವವಿದ್ಯಾಪೀಠದ ಮೂಲ ಆಶಯವೇ ಅಮೂಲ್ಯ ಗ್ರಂಥಗಳನ್ನು ಉಳಿಸುವುದಾಗಿದೆ’ ಎಂದರು. ಕಾಲ ಎಂಬ ವಿಷಯದ ಬಗ್ಗೆ ಪ್ರವಚನ ಅವರು `ಕಾಲಕ್ಕೆ ಇರುವ ಶಕ್ತಿ ಬೇರಾರಿಗೂ ಇರಲಾರದು. ಸುಖ ಹಾಗೂ ದುಃಖ ಚಕ್ರವಿದ್ದಂತೆ’ ಎಂದು ಹೇಳಿದರು.
`ಮಹಾಭಾರತ ಯುದ್ಧದಲ್ಲಿ ಎರಡೂ ಕಡೆಗಳ ಅಸಂಖ್ಯಾತ ಮಂದಿ ಸಾವನ್ನಪ್ಪಿದ ಘಟನೆಯನ್ನು ನೆನೆದು ಧರ್ಮರಾಯ ಪಶ್ಚಾತ್ತಾಪ ಪಡುತ್ತಾನೆ. ಮಕ್ಕಳು, ಮೊಮ್ಮಕ್ಕಳು, ಸೋದರರು, ಚಿಕ್ಕಪ್ಪ-ದೊಡ್ಡಪ್ಪಂದಿರು, ಹೆಣ್ಣು ಕೊಟ್ಟ ಮಾವಂದಿರು, ಸೋದರಮಾವ, ಗುರುಗಳು, ಅಜ್ಜಂದಿರು ಎಲ್ಲರನ್ನೂ ಸಿಂಹಾಸನಕ್ಕಾಗಿ ಸಾಯಿಸಿದೆ ಎಂದು ದುಃಖಿಸುತ್ತಾನೆ. ದೇಹ ಅಳಿದುಹೋಗುವಂಥ ತಪಸ್ಸು ಮಾಡುತ್ತೇನೆ ಎಂಬ ನಿರ್ಧಾರಕ್ಕೆ ಬಂದ. ಅದರೆ ವಾಸ್ತವವಾಗಿ ಕಾಲ ಧರ್ಮರಾಜನಿಂದ ಎಲ್ಲವನ್ನೂ ಮಾಡಿಸಿರುತ್ತಾನೆ. ಪಾಪದ ಲವಲೇಶವೂ ಆತನಿಗೆ ತಟ್ಟುವುದಿಲ್ಲ’ ಎಂದರು.





Discussion about this post