ಶಿರೂರು ಗುಡ್ಡ ಕುಸಿತದ ಮಣ್ಣು ಗಂಗಾವಳಿ ನದಿ ಪಾಲಾಗಿದ್ದು, ಬೆಳಗ್ಗೆ ಅತ್ಯಂತ ಚುರುಕಿನಿಂದ ಕಾರ್ಯಾಚರಣೆ ನಡೆಯಿತು. ಗಂಗಾವಳಿ ನದಿಯಲ್ಲಿ ಲಾರಿ ಸಿಕ್ಕಿಕೊಂಡಿರುವುದನ್ನು ಸಚಿವ ಕೃಷ್ಣ ಬೈರೇಗೌಡ ಖಚಿತಪಡಿಸಿದರು. `ಹೆಲಿಕಾಪ್ಟರ್ ಬಳಸಿ ಕಾರ್ಯಾಚರಣೆ ನಡೆಸಲಾಗುತ್ತದೆ. ರಕ್ಷಣಾ ಅಧಿಕಾರಿಗಳು ಸ್ಥಳದಲ್ಲಿದ್ದಾರೆ’ ಎಂದು ಸಚಿವರು ಬರೆದುಕೊಂಡಿದ್ದಾರೆ. ಇನ್ನೂ ಮಧ್ಯಾಹ್ನದ ವೇಳೆ ವ್ಯಾಪಕ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಈ ನಡುವೆಯೂ ಕಾರ್ಯಾಚರಣೆ ಮುಂದುವರೆದಿದೆ.
ಕಾರ್ಯಾಚರಣೆ ಹಾಗೂ ಈ ಬಗ್ಗೆ ಕ್ಷೇತ್ರದ ಶಾಸಕ ಸತೀಶ್ ಸೈಲ್ ಮಾತನಾಡಿದ ವಿಡಿಯೋ ಇಲ್ಲಿ ನೋಡಿ..





Discussion about this post