ಅಂಕೋಲಾ: ಶಿರೂರಿನಲ್ಲಿ ನಡೆದ ಶಿರೂರು ಗುಡ್ಡ ಕುಸಿತದಿಂದ 8 ಜನರ ಶವ ಸಿಕ್ಕಿದ್ದು, ರಸ್ತೆ ಅಗಲೀಕರಣದ ಹೊಣೆ ಹೊತ್ತ ಐ ಆರ್ ಬಿ ಕಂಪನಿಯ 8 ಜನರ ವಿರುದ್ಧ ಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿ ಶುಕ್ರವಾರ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು `ಗುಡ್ಡ ಕುಸಿತ ಪ್ರಕರಣದಲ್ಲಿ ಇನ್ನೂ ಮೂವರ ಶೋಧ ನಡೆಯುತ್ತಿದೆ. ಈ ಎಲ್ಲಾ ಅವಾಂತರಗಳಿಗೆ ಐ ಆರ್ ಬಿ ಕಂಪನಿಯ ಅವೈಜ್ಞಾನಿಕ ಕೆಲಸವೇ ಕಾರಣ’ ಎಂದು ಆಕ್ರೋಶವ್ಯಕ್ತಪಡಿಸಿದರು. `ಕಳೆದ ಹಲವು ವರ್ಷಗಳಿಂದ ಚತುಷ್ಪಥ ರಸ್ತೆಯಲ್ಲಿ ಸಾಕಷ್ಟು ಸಾವು ನೋವು ಉಂಟಾಗುತ್ತಿದೆ. ಆದರೆ, ಕಂಪನಿ ವಿರುದ್ಧ ಯಾರೂ ಕ್ರಮ ಜರುಗಿಸಿಲ್ಲ. ಕಂಪನಿಯ ಜೊತೆ ಜನಪ್ರತಿನಿಧಿಗಳು-ಅಧಿಕಾರಿಗಳು ಸಹ ಅಕ್ರಮದಲ್ಲಿ ಶಾಮೀಲಾಗಿದ್ದಾರೆ’ ಎಂದು ದೂರಿದರು.
`ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಎಫ್ ಐ ಆರ್ ದಾಖಲಿಸಿರಲಿಲ್ಲ. ಹೀಗಾಗಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದೇನೆ’ ಎಂದರು.





Discussion about this post