ಪ್ರಧಾನಿ ನರೇಂದ್ರ ಮೋದಿ ಅವರ `ಮನ್ ಕಿ ಬಾತ್’ನಿಂದ ಪ್ರೇರಣೆಗೊಂಡ ಸಿದ್ದಾಪುರದ ಹಿರಿಯ ಪತ್ರಕರ್ತ ಕೆಕ್ಕಾರ್ ನಾಗರಾಜ ಭಟ್ಟ ಅವರು ಸ್ವಾತಂತ್ರ್ಯ ಸಂಗ್ರಾಮದ ಕುರಿತು ಕೃತಿ ರಚಿಸಿ ಅದನ್ನು ಪ್ರಧಾನಿ ಕಚೇರಿಗೆ ಕಳುಹಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಂದ ಅವರಿಗೆ ಅಭಿನಂದನಾ ಪತ್ರ ಬಂದಿದೆ.
ಸಿದ್ದಾಪುರದಲ್ಲಿ ನಡೆದ ಸ್ವಾತಂತ್ರ್ಯ ಸಂಗ್ರಾಮ ಕುರಿತಾಗಿ `ದಕ್ಷಿಣದ ಬಾರ್ಡೋಲಿ ಸಿದ್ದಾಪುರದ ಗಂಡುಗಲಿಗಳು’ ಎಂಬ ಪುಸ್ತಕವನ್ನು ಅವರು ಬರೆದಿದ್ದರು. ಈ ಕೃತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ `ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಿದ್ದಾಪುರದ ಮಹತ್ವವನ್ನು ದಾಖಲಿಸುವ ಪುಸ್ತಕ ಬರೆದದಕ್ಕಾಗಿ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಪುಸ್ತಕದ ಪ್ರತಿಯನ್ನು ನನಗೆ ಕಳಿಸಿದ್ದಕ್ಕಾಗಿ ಧನ್ಯವಾದಗಳು. ಸ್ವಾತಂತ್ರ್ಯ ಚಳವಳಿಯಲ್ಲಿ ಸಿದ್ದಾಪುರದ ಸ್ವಾತಂತ್ರ್ಯ ಹೋರಾಟಗಾರರು ವಹಿಸಿರುವ ಪಾತ್ರವನ್ನು ದಾಖಲಿಸುವ ಈ ಉದಾತ್ತ ಪ್ರಯತ್ನ ನಿಜಕ್ಕೂ ಶ್ಲಾಘನೀಯ. ಇದು ಯುವ ಪೀಳಿಗೆಗೆ ರಾಷ್ಟ್ರದ ಪ್ರಗತಿಗಾಗಿ ಕೆಲಸ ಮಾಡಲು ಪ್ರೇರಣೆಯಾಗುತ್ತದೆ. 2047ರ ವೇಳೆಗೆ ವಿಕಸಿತ ಭಾರತವನ್ನು ಕಟ್ಟಲು ಸಹಕಾರಿಯಾಗುತ್ತದೆ’ ಎಂದು ಪ್ರಧಾನಿ ಮೆಚ್ಚುಗೆಯ ಮಾತುಗಳೊಂದಿಗೆ ಪತ್ರ ರವಾನಿಸಿದ್ದಾರೆ.





Discussion about this post