ಯಲ್ಲಾಪುರ: `ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಬಿಜೆಪಿ ಯುವ ಮೋರ್ಚಾದವರು ಮಂಚಿಕೇರಿಯಲ್ಲಿ ಬೈಕ್ ಜಾಥಾ ನಡೆಸಿದರು.
ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಈ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು `ಪ್ರತಿಯೊಬ್ಬರ ಮನೆಯಲ್ಲಿಯೂ ತ್ರಿವರ್ಣ ಧ್ವಜ ಹಾರಾಡಬೇಕು. ಬಿಜೆಪಿ ಕಾರ್ಯಕರ್ತರು ಮನೆ ಮನೆಗೂ ಭೇಟಿ ನೀಡಿ ಧ್ವಜದ ಮಹತ್ವದ ಬಗ್ಗೆ ತಿಳಿಸಬೇಕು’ ಎಂದು ಕರೆ ನೀಡಿದರು.
ಬಿಜೆಪಿ ಪ್ರಮುಖರಾದ ಅರುಣ ಕುಮಾರ ಗೌಡರ್, ರಜತ್ ಬದ್ದಿ, ರಾಘು ಕುಂದರಗಿ, ನಯನ ಇಂಗ್ಲೆ, ವಿನೇಶ್ ಭಟ್, ರಘುಪತಿ ಭಟ್, ಅರ್ಜುನ ಬೆಂಗೇರಿ ಇತರರು ಇದ್ದರು.
ಈ ವೇಳೆ ವಿವಿಧ ಅಂಗಡಿ ಹಾಗೂ ವಾಣಿಜ್ಯ ಮಳಿಗೆಗಳಿಗೆ ತೆರಳಿದ ಕಾರ್ಯಕರ್ತರು ಧ್ವಜ ವಿತರಿಸಿದರು.





Discussion about this post