ಪಿಎಂ. ಸ್ವ-ನಿಧಿ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರ ( Karwar ) ನಗರಸಭೆಗೆ ಪ್ರಶಸ್ತಿ ಘೋಷಿಸಿದೆ.
ಕಾರವಾರ ( Karwar ) ನಗರಸಭೆಯು `Best Performing ULB-in Loan performance at State Level’ ಪ್ರಶಸ್ತಿಗೆ ಆಯ್ಕೆಯಾಗಿದೆ. ಪಿಎಂ ಸ್ವ-ನಿಧಿ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಿದ ರಾಜ್ಯಗಳಿಗೆ ನವದೆಹಲಿಯಲ್ಲಿ ಸಮಾರಂಭ ಆಯೋಜಿಸಿ `Utkrishtata Ki ore Badhte Kadam & Celebreating Achivements, Inspiring Excellence’ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಪಿಎಂ ಸ್ವ-ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬoಧಿಸಿದoತೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಆಗಸ್ಟ್ 22ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ನಗರಸಭೆಯ ಪೌರಾಯುಕ್ತ ಜಗದೀಶ, ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ರಜತ್ ಕುಮಾರ ಹಬ್ಬು, ಕೌಶಲ್ಯಾಭಿವೃದ್ಧಿ ಇಲಾಖೆಯ ಮಲ್ಟಿಟಾಸ್ಕಿಂಗ್ ಆಫಿಸರ್ ಸುನೀಲ ವಸಂತ ನಾಯ್ಕ, ಸಮುದಾಯ ಸಂಘಟಕರಾದ ಪ್ರಭಾಕರ ನಾಯ್ಕ ಮತ್ತು ಮೇರಿ ಡಿಸೋಜಾ, CRP ಗೀತಾ, ನಂದಿನಿ ಈ ಯೋಜನೆ ಅಡಿ ದುಡಿದಿದ್ದರು.





Discussion about this post