6
  • Latest

Vishwadarshana | ನಾಯಕರ ಕಚ್ಚಾಟ: ವಿದ್ಯಾರ್ಥಿಗಳ ಪರದಾಟ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

Vishwadarshana | ನಾಯಕರ ಕಚ್ಚಾಟ: ವಿದ್ಯಾರ್ಥಿಗಳ ಪರದಾಟ!

AchyutKumar by AchyutKumar
in ರಾಜಕೀಯ
advt advt advt
ADVERTISEMENT

`ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರೇ ಇಲ್ಲ’ ಎಂದು ಆರೋಪಿಸಿದ್ದ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಸರ್ಕಾರಿ ಕಾರ್ಯಕ್ರಮದ ಉದ್ಘಾಟನೆಗೆ ( Vishwadarshana ) ತಮ್ಮ ಹೆಸರಿನ ಆಮಂತ್ರಣ ಪತ್ರಿಕೆ ಸಿದ್ಧಪಡಿಸಿದ್ದು, ಇದನ್ನು ಅರಿತು ಕೆಂಡಾಮ0ಡಲರಾದ ಶಾಸಕ ಶಿವರಾಮ ಹೆಬ್ಬಾರ್ ಆ ಕಾರ್ಯಕ್ರಮವನ್ನೇ ರದ್ಧು ಪಡಿಸಿದ್ದಾರೆ! S News ಡಿಜಿಟಲ್

ಆದರೆ, `ಈ ವಿಷಯ ತಮ್ಮ ಗಮನಕ್ಕೆ ಇರಲಿಲ್ಲ. ತಿಳಿದ ತಕ್ಷಣ ಶಾಸಕರ ಗಮನಕ್ಕೆ ತಂದು ಕಾರ್ಯಕ್ರಮ ರದ್ದುಪಡಿಸಿದ್ದೇವೆ’ ಎಂದು ಹರಿಪ್ರಕಾಶ ಕೋಣೆಮನೆ ಹೇಳಿದ್ದಾರೆ.  ಎಲ್ಲವೂ ಅಂದುಕೊ0ಡ0ತೆ ನಡೆದಿದ್ದರೆ ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ (Vishwadarshana) ಅಗಸ್ಟ 28ರಂದು ತಾಲೂಕಾ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ನಡೆಯಬೇಕಿತ್ತು. ಇದಕ್ಕಾಗಿ ಕರ್ನಾಟಕ ಸರ್ಕಾರದ ಲಾಂಚನ ಬಳಸಿ ಪದವಿಪೂರ್ವ ಉಪನಿರ್ದೇಶಕರ ಹೆಸರಿನಲ್ಲಿ ಆಮಂತ್ರಣ ಪತ್ರಿಕೆ ಸಹ ಸಿದ್ಧವಾಗಿತ್ತು. ಆದರೆ, ಅದರಲ್ಲಿ ನಿಯಮಾನುಸಾರ ಪ್ರಕಟವಾಗಬೇಕಿದ್ದ ಶಾಸಕರ ಹೆಸರೇ ಇರಲಿಲ್ಲ! ಶಾಸಕರ ಹೆಸರು ಬರಬೇಕಿದ್ದ ಜಾಗದಲ್ಲಿ ಬಿಜೆಪಿಯ ವಕ್ತಾರರೂ ಆಗಿರುವ ವಿಶ್ವದರ್ಶನ ಸಂಸ್ಥೆ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಹೆಸರಿದ್ದು, ಸರ್ಕಾರದ ಪ್ರತಿನಿಧಿಯಾಗಿ ಭಾಗವಹಿಸಬೇಕಿದ್ದ ಇಲಾಖೆಯ ಉಪನಿರ್ದೇಶಕರ ಹೆಸರು ಸಹ ಆಮಂತ್ರಣದಲ್ಲಿರಲಿಲ್ಲ.

ADVERTISEMENT
ADVERTISEMENT
ಸರ್ಕಾರಿ ಲಾಂಚನ ಬಳಸಿ ಸಂಬ0ಧಿಸಿದ ಅಧಿಕಾರಿ ಹಾಗೂ ಶಾಸಕರ ಹೆಸರು ಪ್ರಕಟಿಸದ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ

ಒಟ್ಟಾರೆಯಾಗಿ ಸರ್ಕಾರಿ ಹೆಸರಿನಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮದಂತೆ ಈ ಆಮಂತ್ರಣ ಪತ್ರಿಕೆ ಸಿದ್ಧಪಡಿಸಲಾಗಿದ್ದು, ಕೆಲವೇ ಕೆಲವು ಮಾಧ್ಯಮದವರಿಗೆ ಈ ಆಮಂತ್ರಣ ಪತ್ರಿಕೆಯನ್ನು ಸಂಸ್ಥೆಯವರು ತಲುಪಿಸಿದ್ದರು. ಆದರೆ, ನಿಯಮಾನುಸಾರ ಪ ಪೂ ಕಾಲೇಜಿನ ಉಪನಿರ್ದೇಶಕರಿಗೆ ಆಮಂತ್ರಣ ನೀಡಿರಲಿಲ್ಲ. ತನ್ನ ಹೆಸರು ಇಲ್ಲದಿರುವುದು ಹಾಗೂ ತನಗೆ ಆಮಂತ್ರಣ ಇಲ್ಲದಿರುವುದನ್ನು ಅರಿತ ಶಿವರಾಮ ಹೆಬ್ಬಾರ್ ಇಡೀ ಕಾರ್ಯಕ್ರಮವನ್ನು ರದ್ದು ಮಾಡಿಸಿದ್ದಾರೆ. `ಕೊನೆಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿದ್ದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗಿದ್ದು ಗಮನಕ್ಕೆ ಬಂದಿದೆ. ಶಿಕ್ಷಣ ಸಂಸ್ಥೆಯವರು ಆ ರೀತಿ ಮಾಡಬಾರದಿತ್ತು. ಅವರಿಗೆ ಎಚ್ಚರಿಕೆ ನೀಡಿದ್ದೇವೆ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜಪ್ಪ ತಿಳಿಸಿದರು.

ಸ್ಪಷ್ಟನೆ:

Advertisement. Scroll to continue reading.
Advertisement. Scroll to continue reading.

`ಶಾಸಕರ ಹೆಸರು ಆಮಂತ್ರಣ ಪತ್ರಿಕೆಯಲ್ಲಿ ಇಲ್ಲದ ಕಾರಣ ನಾನೇ ಶಾಸಕರಿಗೆ ತಿಳಿಸಿ ಕಾರ್ಯಕ್ರಮ ರದ್ದು ಮಾಡಿದ್ದು, ಇನ್ನೊಂದು ದಿನಾಂಕದoದು ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ನಮ್ಮ ತಪ್ಪು ಏನೂ ಇಲ್ಲ’ ಎಂದು ಹರಿಪ್ರಕಾಶ ಕೋಣೆಮನೆ ತಿಳಿಸಿದರು. ಸಂಸ್ಥೆಯವರು ಫೋನ್ ಮೂಲಕ ಆದ ಪ್ರಮಾದದ ಬಗ್ಗೆ ತಿಳಿಸಿದ್ದು, ಇನ್ಮುಂದೆ ಈ ರೀತಿ ಆಗದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

S News ಡಿಜಿಟಲ್

ShareSendTweetShare
ADVERTISEMENT
Previous Post

Pocso | ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗೊತ್ತಾಗಿದ್ದು ಇಷ್ಟು.. ಗೊತ್ತಾಗದೇ ನಡೆದಿದ್ದು ಎಷ್ಟು?

Next Post

ಹೆಚ್ಚಿದ ಅತ್ಯಾಚಾರ ಪ್ರಕರಣ: ನಾಗರಿಕ ವೇದಿಕೆ ಕಳವಳ

Next Post

ಹೆಚ್ಚಿದ ಅತ್ಯಾಚಾರ ಪ್ರಕರಣ: ನಾಗರಿಕ ವೇದಿಕೆ ಕಳವಳ

Cinema | ಅಂಕೋಲೆ ಪೋರನ ಚಿತ್ರ ನಿರ್ಮಾಣ ಕನಸು: ಸ್ಪರ್ಧೆಗೆ ಸಜ್ಜಾಗುತ್ತಿರುವ ಕಿರುಚಿತ್ರ

Road problems | ಸುಗಮ ಸಂಚಾರಕ್ಕೆ ತೊಂದರೆಯಾದ ಕಸದ ವಾಹನ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.