`ಸಮುದ್ರ (sea) ಕೊರೆತಕ್ಕೆ ಶಾಶ್ವತ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದು, ಅವರು ಬೇಡಿಕೆ ಈಡೇರಿಸುವ ಆಶ್ವಾಸನೆ ನೀಡಿ 1 ತಿಂಗಳು ಕಳೆದರೂ ಯಾವುದೇ ಕ್ರಮವಾಗಿಲ್ಲ’ ಎಂದು ಅಂಕೋಲಾ ಹಾರವಾಡದ ಜನ ದೂರಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅಂಕೋಲಾ ಹಾರವಾಡ ತರಂಗಮೇಟದ ಜನ ಸಮುದ್ರ ಕೊರತ ಆಗದಂತೆ ತಡೆಗೋಡೆ ನಿರ್ಮಿಸುವಂತೆ ಒತ್ತಾಯಿಸಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರಿಗೆ ಆ ಭಾಗದ ಜನರ ಪರವಾಗಿ ಮನವಿ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಶಿರೂರಿಗೆ ಭೇಟಿ ನೀಡಿದಾಗ ಸಹ ಅವರಿಗೆ ಈ ವಿಷಯ ತಿಳಿಸಿದ್ದು, ಸೂಕ್ತ ಕ್ರಮದ ಭರವಸೆ ನೀಡಿದ್ದರು. ಆದರೆ, ಅದೂ ಈಡೇರಿಲ್ಲ’ ಎಂದರು. (sea)
`ಈ ಭಾಗದಲ್ಲಿ ನಿರಂತರವಾಗಿ ಸಮುದ್ರ ಕೊರೆತ ಉಂಟಾಗುತ್ತಿದ್ದು ಗಿಡ-ಮರಗಳು ಕೊಚ್ಚಿ ಹೋಗಿದೆ. ಈ ಬಗ್ಗೆ ಗ್ರಾಮ ಪಂಚಾಯತದಿ0ದ ಹಿಡಿದು ಸರ್ಕಾರದ ದೊಡ್ಡ ದೊಡ್ಡ ಅಧಿಕಾರಿಗಳವರೆಗೆ ಮನವಿ ಸಲ್ಲಿಸಲಾಗಿದೆ. ಆದರೂ ಪ್ರಯೋಜನವಾಗಿಲ್ಲ’ ಎಂದು ಅಸಮಧಾನ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಕಚೇರಿಗೆ ಬಂದ ಜನ ಮಾಡಿದ್ದೇನು? ಮಾತನಾಡಿದ್ದೇನು? ವಿಡಿಯೋ ಇಲ್ಲಿ ನೋಡಿ..





Discussion about this post