ಸಿದ್ದಾಪುರ ತಾಲೂಕಿನ ಕವಂಚೂರು ಹಾಗೂ ವಾಜಗೋಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾರ್ಯನಿರ್ವಹಿಸುತ್ತಿದ್ದ ಕವನಕುಮಾರ್ ಇದೀಗ ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿಗಳ ಆಪ್ತ ಸಹಾಯಕರಾಗಿ ನೇಮಕವಾಗಿದ್ದಾರೆ.
ಹೊನ್ನಾವರ ತಾಲೂಕಿನ ಮಾವಿನಹೊಳೆಯವರಾದ ಅವರು ಸಿದ್ದಾಪುರ ತಾಲೂಕಿನ ಬಿದ್ರಕಾನ್ ಗ್ರಾಮ ಪಂಚಾಯತ್ ಪಿಡಿಓ ಆಗಿದ್ದಾಗ ಎರಡು ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದಿದ್ದರು. ಇದಾದ ನಂತರ ಹೊನ್ನಾವರ ತಾಲೂಕಿನ ಹಳದಿಪುರ, ಮಂಕಿ, ಸಿದ್ದಾಪುರ ತಾಲೂಕಿನ ಹಲಗೇರಿ, ಕ್ಯಾದಗಿ, ಶಿರಳಗಿ, ಮನ್ಮನೆ ಸೇರಿದಂತೆ ವಿವಿಧ ಪಂಚಾಯತ್ದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿದ್ದರು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕಿಯಾಗಿದ್ದ ರೂಪಾಲಿ ನಾಯ್ಕರ ಆಪ್ತಕಾರ್ಯದರ್ಶಿಯಾಗಿ ಕೆಲಸ ಮಾಡಿದ ಅನುಭವ ಅವರಿಗಿದೆ. ಇದೀಗ ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿಗಳಾದ ಎಂ ಕೆ ಪ್ರಾಣೇಶ್ ಅವರ ಆಪ್ತಸಹಾಯಕರಾಗಿ ನೇಮಕವಾಗಿದ್ದಾರೆ.





