6
  • Latest

ಕುಂದರಗಿಯ ಕೂಸಿನಮನೆಗೆ ಬಂದ IAS ಅಧಿಕಾರಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕುಂದರಗಿಯ ಕೂಸಿನಮನೆಗೆ ಬಂದ IAS ಅಧಿಕಾರಿ

AchyutKumar by AchyutKumar
September 6, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ನರೇಗಾ ಕೂಲಿಕಾರರ ಮೂರು ವರ್ಷದೊಳಗಿನ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕುಂದರಗಿಯಲ್ಲಿ ಕೂಸಿನ ಮನೆ ನಿರ್ಮಿಸಲಾಗಿದ್ದು, ಶುಕ್ರವಾರ ಜಿ ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಈಶ್ವರಕುಮಾರ ಕಾಂದೋ ಅಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಲ್ಲಿಗೆ ಆಗಮಿಸುವ ಮಕ್ಕಳ ಹಾಜರಿ, ಸರಕಾರದಿಂದ ಒದಗಿಸಲಾದ ಆಟಿಕೆ ಸಾಮಗ್ರಿ ಹಾಗೂ ಆಹಾರ ವಿತರಣೆ ವೇಳಾಪಟ್ಟಿ ಕುರಿತು ಮಾಹಿತಿ ಪಡೆದರು. ಮಕ್ಕಳನ್ನು ನೋಡಿಕೊಳ್ಳುವವರಿಗೆ ಸೂಕ್ತ ತರಬೇತಿ ನೀಡುವಂತೆ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಇದಾದ ನಂತರ ಕುಂದರಗಿ ಪಶು ಚಿಕಿತ್ಸಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿನೀಡಿ ಸಿಬ್ಬಂದಿ ಹಾಜರಾತಿ, ಗ್ರಾಮೀಣ ಜನರಿಗೆ ಸಿಗುವ ಔಷಧೋಪಚಾರಗಳು, ಔಷಧೀಯ ದಾಸ್ತಾನು ಕುರಿತು ಮಾಹಿತಿ ಪಡೆದರು.
ಇದಾದ ನಂತರ ಚಂದಗುಳಿ, ಹಾಸಣಗಿ ಹಾಗೂ ನಂದೊಳ್ಳಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ನರೇಗಾ ಮತ್ತು ವಿವಿಧ ಯೋಜನೆಗಳ ಅಡಿ ನಡೆದ ಕಾಮಗಾರಿಗಳ ವೀಕ್ಷಣೆ ಮಾಡಿದರು.

Advertisement. Scroll to continue reading.
ADVERTISEMENT
ADVERTISEMENT

ಹಾಸಣಗಿ ಗ್ರಾಮ ಪಂಚಾಯತಿ ಕಚೇರಿ, ಸಭಾ ಭವನ, ದಾಸ್ತಾನು ಕೊಠಡಿ, ಮಾಳಕೊಪ್ಪ ಶಾಲೆಯಲ್ಲಿ ನರೇಗಾದಡಿ ನಿರ್ಮಿತ ಶೌಚಾಲಯ ಹಾಗೂ ಕಾಂಪೌ0ಡ್, ಒಳ್ಳೆಸರದಲ್ಲಿ ನಿರ್ಮಿತ ಕೊಳವೆ ಬಾವಿ ಮರುಪೂರಣ ಘಟಕ ಕಾಮಗಾರಿ ಪರಿಶೀಲಿಸಿದರು. ಬಾಚನಳ್ಳಿಯಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಪ್ರತಿದಿನದ ಹಾಜರಾತಿ, ಮಕ್ಕಳ ಹಾಜರಾತಿ, ಮಕ್ಕಳಿಗೆ ವಿತರಿಸುವ ಆಹಾರ ಪದಾರ್ಥಗಳ ವಿವರಣೆ ಪಡೆದರು. ನಂದೊಳ್ಳಿ ಶಾಲೆಯ ಅಡುಗೆ ಕೋಣೆ ಹಾಗೂ ಶೌಚಾಲಯವನ್ನು ನೋಡಿದರು. ಕವಡಿಕೆರೆಗೆ ತೆರಳಿ ಮೀನು ಸಾಕಾಣಿಕೆ ಪ್ರಕ್ರಿಯೆ ಹಾಗೂ ಕೆರೆಯ ಹೆಚ್ಚಿನ ಅಭಿವೃದ್ಧಿ ಕುರಿತು ಚರ್ಚಿಸಿದರು.

Advertisement. Scroll to continue reading.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಧನವಾಡಕರ, ನರೇಗಾ ಸಹಾಯಕ ನಿರ್ದೇಶಕ ಮಂಜುನಾಥ ಅಗೇರ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್. ಹೆಗಡೆ, ಪಿಆರ್‌ಇಡಿ ಎಇಇ ಅಶೋಕ ಬಂಟ, ಸಿಡಿಪಿಒ ಶ್ರೀದೇವಿ ಪಟೇಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ರಾಜೇಶ್ ಶೇಟ್, ಶಿವಕುಮಾರ ವಿರಕ್ತಮಠ, ರವಿ ಪಟಗಾರ, ಐಇಸಿ ಸಂಯೋಜಕರಾದ ಫಕ್ಕೀರಪ್ಪ ತುಮ್ಮಣ್ಣನವರ, ಪ್ರಕಾಶ ಹೆಗಡೆ ಇದ್ದರು

ShareSendTweetShare
ADVERTISEMENT
Previous Post

ನಮ್ಮ ಭೂಮಿ ನಮ್ಮ ಹಕ್ಕು | ಜಮೀನಿಗಾಗಿ ಪ್ರತಿಭಟಿಸಿದವರಿಗೆ ಜೈಲು: ಇನ್ನೂ ಸಿಕ್ಕಿಲ್ಲ ಜಾಮೀನು!

Next Post

ಚಿನ್ನ ಕದ್ದ ಹೋಂ ಗಾರ್ಡಗೆ ಜೈಲಿನಲ್ಲಿ ಹಬ್ಬದೂಟ!

Next Post

ಚಿನ್ನ ಕದ್ದ ಹೋಂ ಗಾರ್ಡಗೆ ಜೈಲಿನಲ್ಲಿ ಹಬ್ಬದೂಟ!

ಜೂಜು ಅಡ್ಡೆ ಮೇಲೆ ದಾಳಿ ನಡೆಸಿದವರಿಗೆ ಸಿಕ್ಕಿದ್ದು ಸತ್ತ ಕೋಳಿ!

ಮದ್ಯಪ್ರಿಯ ದೇವರ ಮೇಲೂ ಕಣ್ಣಿಟ್ಟ ಕಳ್ಳರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.