6
  • Latest

ದೃಷ್ಟಿಬೊಟ್ಟು: ಕಲರ್ಸ ಕನ್ನಡಕ್ಕೆ ಹೊಸ ಧಾರವಾಹಿ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸಿನೆಮಾ

ದೃಷ್ಟಿಬೊಟ್ಟು: ಕಲರ್ಸ ಕನ್ನಡಕ್ಕೆ ಹೊಸ ಧಾರವಾಹಿ

AchyutKumar by AchyutKumar
in ಸಿನೆಮಾ

ಕಾರವಾರ: ಕನ್ನಡಿಗರಿಗೆ ಸದಭಿರುಚಿಯ ಮನೋರಂಜನೆ ನೀಡುತ್ತಿರುವ `ಕಲರ್ಸ್ ಕನ್ನಡ ವಾಹಿನಿ’ ಇದೀಗ ಮತ್ತೊಂದು ಹೊಸ ಧಾರಾವಾಹಿ ಪ್ರಸಾರಕ್ಕೆ ಮುಂದಾಗಿದೆ. ಸೆ 9ರಿಂದ ಸೋಮವಾರದಿಂದ ಶನಿವಾರದವರೆಗೆ ಸಂಜೆ 6.30ಕ್ಕೆ `ದೃಷ್ಟಿಬೊಟ್ಟು’ ಎಂಬ ಧಾರಾವಾಹಿ ಪ್ರಸಾರ ಆಗಲಿದೆ.

ADVERTISEMENT

ಜನಪ್ರಿಯ ಕಿರುತೆರೆ ನಟ ವಿಜಯ್ ಸೂರ್ಯ ಈ ಧಾರಾವಾಹಿ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿದ್ದಾರೆ. ನಾಯಕಿ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಪರದೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿಯಲ್ಲಿ ಪಾತ್ರ ನಿಭಾಯಿಸುತ್ತಿದ್ದಾರೆ. ಜೊತೆಗೆ ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿಯ, ಹಿರಿಯ ನಟ, ನಟಿಯರು ಪ್ರಮುಖ ಪಾತ್ರ ನಿಭಾಯಿಸಲಿದ್ದಾರೆ.

ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡಿರುವುದು ದೃಷ್ಟಿಬೊಟ್ಟು ಧಾರಾವಾಹಿಯ ಮತ್ತೊಂದು ಹೆಗ್ಗಳಿಕೆ. `ಈ ಧಾರಾವಾಹಿ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ’ ಎನ್ನುತ್ತಾರೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್. ಎರಡು ವಿಭಿನ್ನ ಕೌಟುಂಬಿಕ ಹಿನ್ನೆಲೆಗಳಿಂದ ಬಂದ ದೃಷ್ಟಿ ಎಂಬ ಹುಡುಗಿ ಹಾಗೂ ದತ್ತ ಶ್ರೀರಾಮ್ ಪಾಟೀಲ್ ಎಂಬ ಹುಡುಗನ ಬದುಕುಗಳು ಸಂಧಿಸಿದಾಗ ನಡೆಯುವ ಕುತೂಹಲಕರ ಕಥಾನಕವನ್ನು `ದೃಷ್ಟಿಬೊಟ್ಟು’ ಎಳೆಎಳೆಯಾಗಿ ಅನಾವರಣಗೊಳಿಸುತ್ತದೆ.

Advertisement. Scroll to continue reading.

ದೃಷ್ಟಿಯ ಪಾಲಿಗೆ ರೂಪ ಅನ್ನುವುದೇ ಶಾಪ. ತನ್ನ ರೂಪವನ್ನೇ ಬದಲಾಯಿಸಿಕೊಂಡು ಬದುಕುತ್ತಿರುವ ಅವಳಿಗೆ ತನ್ನ ಸೋದರಿಯನ್ನು ಮರಳಿ ಮನೆಗೆ ಕರೆತಂದು ಕುಟುಂಬವನ್ನು ಒಂದು ಮಾಡಬೇಕೆಂಬ ಗುರಿ. ಮೊದಲು ಮೆಕಾನಿಕ್ ಆಗಿ ಈಗ ರೌಡಿ ಆಗಿರುವ ಕಥಾನಾಯಕ ದತ್ತ, ಸುಂದರವಾಗಿರುವ ಹೆಣ್ಣುಗಳನ್ನ ಕಂಡರೆ ಉರಿದು ಬೀಳುತ್ತಾನೆ. ದುರುಳ ಪೋಲೀಸನೊಬ್ಬನ ಕೈಗೆ ಸಿಕ್ಕ ದೃಷ್ಟಿ ಅವನ ಕಿರುಕುಳಕ್ಕೆ ಸಿಕ್ಕು ಒದ್ದಾಡುತ್ತಿರುವಾಗ ದತ್ತನ ಪ್ರವೇಶವಾಗುತ್ತದೆ. ಆಮೇಲೆ ಕತೆ ಹಲವು ಊಹಿಸಲಾಗದ ತಿರುವುಗಳನ್ನು ತೆಗೆದುಕೊಳ್ಳುತ್ತದೆ.

Advertisement. Scroll to continue reading.

ದೃಷ್ಟಿಗೆ ತನ್ನ ಸೋದರಿ ಸಿಕ್ಕಳೆ? ವಿಧಿ ದತ್ತ ಮತ್ತು ದೃಷ್ಟಿಯನ್ನು ಒಂದು ಮಾಡುವುದೆ? ದತ್ತನನ್ನು ಅವನ ದುಷ್ಟ ಸೋದರಿಯರಿಂದ ದೃಷ್ಟಿ ಕಾಪಾಡಬಲ್ಲಳೆ? ಇಂಥ ಎಲ್ಲ ಪ್ರಶ್ನೆಗಳಿಗೂ ಧಾರವಾಹಿಯಲ್ಲಿ ಉತ್ತರ ಸಿಗುತ್ತದೆ.

Previous Post

ವಿಮಾನ ನಿಲ್ದಾಣಕ್ಕಾಗಿ ಭೂಮಿ ಕೊಟ್ಟವರಿಗೆ ಸಿಕ್ಕಿದ್ದೇನು?

Next Post

ಶಿರಲೆ ಘಟ್ಟದಲ್ಲಿ ಲಾರಿ ಪಲ್ಟಿ: ಚಾಲಕನಿಗೆ ಗಾಯ

Next Post

ಶಿರಲೆ ಘಟ್ಟದಲ್ಲಿ ಲಾರಿ ಪಲ್ಟಿ: ಚಾಲಕನಿಗೆ ಗಾಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ