6
  • Latest

ಮಲೆನಾಡು ಸಂಘಕ್ಕೆ 25ರ ಹರೆಯ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಲೆನಾಡು ಸಂಘಕ್ಕೆ 25ರ ಹರೆಯ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಸಾವಿರ ಸಂಖ್ಯೆಯ ಸದಸ್ಯರಿಂದ ಶುರುವಾದ ಮಲೆನಾಡು ಕೃಷಿ ಅಭಿವೃದ್ಧಿ ಸೇವಾ ಸಹಕಾರಿ ಸಂಘ ಈಗಲೂ ಅಷ್ಟೇ ಪ್ರಮಾಣದ ಸದಸ್ಯರನ್ನು ಉಳಿಸಿಕೊಂಡು 25 ವರ್ಷ ಪೂರೈಸಿದೆ. 26ನೇ ವರ್ಷಕ್ಕೆ ಈ ಪಾದಾರ್ಪಣೆ ಮಾಡುತ್ತಿರುವ ಹೊಸ್ತಿಲಿನಲ್ಲಿ ಈ ಸಂಘ ಸಾಧಕ ಕೃಷಿಕರಿಗೆ ಸನ್ಮಾನ ಸೇರಿ ಹಲವು ಕಾರ್ಯಕ್ರಮವನ್ನು ಆಯೋಜಿಸಿದೆ.

ಯಲ್ಲಾಪುರ, ಅಂಕೋಲಾ, ಮುಂಡಗೋಡು ಹಾಗೂ ಜೊಯಿಡಾ ತಾಲೂಕು ಈ ಸಂಘದ ಸೇವಾ ವ್ಯಾಪ್ತಿ. ನೀರಾವರಿ ಪಂಪ್‌ಸೆಟ್, ಕೃಷಿ ಉಪಕರಣ, ಡ್ರಿಪ್ ಸೇರಿ ಹಲವು ಸೇವೆಗಳನ್ನು ಸ್ಪರ್ಧಾತ್ಮಕ ದರದಲ್ಲಿ ನೀಡುತ್ತಿರುವ ಮಲೆನಾಡು ಸಹಕಾರಿ ಸಂಘಕ್ಕೆ ಗ್ರಾಮೀಣ ಪ್ರದೇಶದ ರೈತರೇ ಮುಖ್ಯ ಗ್ರಾಹಕರು. ರೈತರ ಬಳಿ ಕಾಸಿಲ್ಲದ ಪರಿಸ್ಥಿತಿಯಲ್ಲಿಯೂ ಅಗತ್ಯ ಕೃಷಿ ಉಪಕರಣಗಳನ್ನು ಪೂರೈಸಿ ಅವರ ಆರ್ಥಿಕ ಅಭಿವೃದ್ಧಿಗೆ ನೆರವು ನೀಡಿದ ಹಿರಿಮೆ ಈ ಸಂಘದ್ದು.

`25 ವರ್ಷಗಳ ಹಿಂದೆ ಮನೆ ಮನೆ ತಿರುಗಾಟ ನಡೆಸಿ ಸಂಘ ಸ್ಥಾಪನೆ ಮಾಡಲಾಯಿತು. ಆ ಅವಧಿಯಲ್ಲಿ ಕೃಷಿ ಸಲಕರಣೆಗಳಿಗೆ ಜನ ಹುಬ್ಬಳ್ಳಿ-ಶಿರಸಿಗೆ ಹೋಗಬೇಕಿದ್ದು, ಸಮೀಪದಲ್ಲಿ ಸೇವೆ ನೀಡುವ ಉದ್ದೇಶ ಮಲೆನಾಡು ಸಂಘಕ್ಕಿತ್ತು. ಆಡಳಿತ ಮಂಡಳಿ ಸಹಕಾರ ಹಾಗೂ ಸಿಬ್ಬಂದಿ ಶ್ರಮದಿಂದ ಸಂಘ ಕಳೆದ ವರ್ಷ 47.85 ಲಕ್ಷ ರೂ ಲಾಭಗಳಿಸಿದೆ’ ಎಂದು ಮಲೆನಾಡು ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಅಧ್ಯಕ್ಷ ಎಂ ಆರ್ ಹೆಗಡೆ ಕುಂಬ್ರಿಗುಡ್ಡೆ ಸುದ್ದಿಗಾರರಿಗೆ ತಿಳಿಸಿದರು.

`ಸೆಪ್ಟೆಂಬರ್ 13ರಂದು ಮಧ್ಯಾಹ್ನ 3 ಗಂಟೆಗೆ ಅಡಿಕೆ ಭವನದಲ್ಲಿ ಮಲೆನಾಡು ಕೃಷಿ ಅಭಿವೃದ್ಧಿ ಸೇವಾ ಸಹಕಾರಿ ಸಂಘದ ವಾರ್ಷಿಕ ಸಭೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿಯೇ 14 ಸಾಧಕ ಕೃಷಿಕರಿಗೆ ಸನ್ಮಾನಿಸಲಾಗುತ್ತದೆ. ಅವರ ಕೃಷಿ ಸಾಧನೆ ಹಾಗೂ ಮಾರ್ಗದರ್ಶನ ಇತರರಿಗೂ ಮಾದರಿಯಾಗಬೇಕು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಸಂಘದ ಪ್ರಮುಖರಾದ ಎಂ ಜಿ ಭಟ್ಟ ಶೀಗೆಪಾಲ್ ತಿಳಿಸಿದರು.
ಪ್ರಮುಖರಾದ ವಿನಾಯಕ ಹೆಗಡೆ, ಮಧುಕೇಶ್ವರ ಭಟ್ಟ, ಎಂ ಆರ್ ಹೆಗಡೆ ತರೆಹಳ್ಳಿ, ದತ್ತಾತ್ರೇಯ ಬೋಳಗುಡ್ಡೆ ಇದ್ದರು.

ShareSendTweetShare
Previous Post

ನಿಸ್ವಾರ್ಥ ಸೇವೆಯ ಶಿಕ್ಷಕಿಗೆ ಜನ ಸಾಮಾನ್ಯರಿಂದ ಸನ್ಮಾನ

Next Post

ಅರಣ್ಯ ಅತಿಕ್ರಮಣ: ಮೂರು ದಶಕದ ಹೋರಾಟಕ್ಕೂ ಸಿಕ್ಕಿಲ್ಲ ನ್ಯಾಯ!

Next Post

ಅರಣ್ಯ ಅತಿಕ್ರಮಣ: ಮೂರು ದಶಕದ ಹೋರಾಟಕ್ಕೂ ಸಿಕ್ಕಿಲ್ಲ ನ್ಯಾಯ!

ಬೈಕಿನವನನ್ನು ಎಳೆದೊಯ್ದ ರಿಕ್ಷಾ: ಪ್ರತ್ಯಕ್ಷದರ್ಶಿಯಿಂದ ಪೊಲೀಸ್ ದೂರು!

ಬೆಳಗ್ಗೆ ಚಹಾ ಅಂಗಡಿ.. ರಾತ್ರಿ ಮದ್ಯ ಮಾರಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.