6
  • Latest

ಬಡ ಹೋರಾಟಗಾರಿನಿಗೆ ಸಿಗಲ್ಲ ಚುನಾವಣಾ ಟಿಕೆಟು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಡ ಹೋರಾಟಗಾರಿನಿಗೆ ಸಿಗಲ್ಲ ಚುನಾವಣಾ ಟಿಕೆಟು!

AchyutKumar by AchyutKumar
in ಸ್ಥಳೀಯ

ಶಿರಸಿ: ಅರಣ್ಯ ಅತಿಕ್ರಮಣ ಹೋರಾಟಗಾರ ರವೀಂದ್ರ ನಾಯ್ಕ ಅವರಿಗೆ ಚುನಾವಣಾ ಟಿಕೆಟ್ ಕೊಡಬೇಕು ಎಂದು ಅನೇಕರು ರಾಜಕೀಯ ವರಿಷ್ಠರಿಗೆ ಆಗ್ರಹಿಸಿದ್ದರು. ಆದರೆ, `ರವೀಂದ್ರ ನಾಯ್ಕರ ಬಳಿ ದುಡ್ಡಿಲ್ಲ’ ಎಂದು ನಾಯಕರು ಹೇಳಿದ್ದರು. ಇದೇ ಕಾರಣದಿಂದ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ!

ADVERTISEMENT

ಈ ವಿಷಯ ಶಿರಸಿಯ ಗುರುವಾರ ಮಾರಿಕಾಂಬ ಕಲ್ಯಾಣ ಮಂಟಪದಲ್ಲಿ ನಡೆದ ಅರಣ್ಯ ಅತಿಕ್ರಮಣದಾರರ ಸಭೆಯಲ್ಲಿ ಬಹಿರಂಗವಾಗಿದೆ. ಸ್ವತಃ ರವೀಂದ್ರ ನಾಯ್ಕ ಅವರು ಈ ವಿಷಯವನ್ನು ನೆರೆದಿದ್ದವರ ಮುಂದೆ ಹೇಳಿದ್ದು, `ನನ್ನ ಬಳಿ ಹಣ ಇಲ್ಲದಿರಬಹುದು. ಆದರೆ, ನಿಮ್ಮಂಥ ಜನ ನನ್ನೊಂದಿಗಿದ್ದಾರೆ’ ಎನ್ನುತ್ತ ಭಾವುಕರಾದರು. `ಜನರ ಒತ್ತಾಯಕ್ಕೆ ಮಣಿದು ನಾನು ನನ್ನ ಸಾಮರ್ಥ್ಯದ ಆಧಾರದಲ್ಲಿ ಟಿಕೆಟ್ ಕೇಳಿದ್ದೆ. ಆದರೆ, ಚುನಾವಣೆಗೆ ಖರ್ಚು ಮಾಡುವಷ್ಟು ಹಣ ಇಲ್ಲ ಎಂದು ಟಿಕೆಟ್ ಕೊಡಲಿಲ್ಲ. ನನ್ನೊಂದಿಗೆ ಅರಣ್ಯ ಅತಿಕ್ರಮಣದಾರರಿದ್ದು, ದುಡ್ಡು ಇಲ್ಲವೆಂದು ಅಪಾದನೆ ಮಾಡಿದವರಿಗೆ ಸೂಕ್ತ ಸಮಯದಲ್ಲಿ ಸೂಕ್ತ ವೇದಿಕೆಯಲ್ಲಿ ಉತ್ತರಿಸುವೆ’ ಎಂದವರು ಮಾರ್ಮಿಕವಾಗಿ ನುಡಿದರು.

`ಹೋರಾಟವಿಲ್ಲದೇ ನ್ಯಾಯವಿಲ್ಲ. ದೇಶದ ಎಲ್ಲಾ ಭೂಮಿ ಹಕ್ಕಿನ ಫಲಶೃತಿಯಲ್ಲಿ ಹೋರಾಟದ ಇತಿಹಾಸವಿದೆ. ಅರಣ್ಯ ಭೂಮಿ ಹಕ್ಕು ಪ್ರಾಪ್ತವಾಗುವವರೆಗೂ, ಹೋರಾಟದ ಗರ್ಜನೆ ನಿಲ್ಲಿಸದ್ದೀರಿ’ ಎಂದು ಈ ವೇಳೆ ಎಂದು ಸಾಮಾಜಿಕ ಚಿಂತಕ ಕಾಗೋಡ ತಿಮ್ಮಪ್ಪ ಅವರು ಅರಣ್ಯವಾಸಿಗಳಿಗೆ ಕರೆ ನೀಡಿದರು. `ಮಲಗಿರುವ ಸರ್ಕಾರವನ್ನು ಜನ ಎದ್ದೇಳಿಸಬೇಕು’ ಎಂದು ಕಾಗೋಡು ತಿಮ್ಮಪ್ಪ ಕರೆ ನೀಡಿದರು.

Advertisement. Scroll to continue reading.

`ಭೂಮಿ ಮಾನವನ ಸಂವಿಧಾನ ಬದ್ಧ ಹಕ್ಕು. ಕಾನೂನು ಬಂದರೂ ಮಂಜೂರಿಯಲ್ಲಿ ವಿಫಲರಾಗಿದ್ದೇವೆ. ಜನಪ್ರತಿನಿಧಿಗಳ ನಿರಾಸಕ್ತಿಗೆ ಇದಕ್ಕೆ ಕಾರಣವಾಗಿದೆ. ಹೋರಾಟದೊಂದಿಗೆ ಕಾನೂನು ಜಾಗೃತವನ್ನು ಮೂಡಿಸಿ’ ಎಂದವರು ಹೇಳಿದರು.

Advertisement. Scroll to continue reading.

ಹೋರಾಟಗಾರ ಜೆ ಎಮ್ ಶೆಟ್ಟಿ ಮಾತನಾಡಿ `ಮುಂದಿನ ದಿನಗಳಲ್ಲಿ ಭೂಮಿ ಹಕ್ಕಿಗಾಗಿ ಕಾನೂನು ಹೋರಾಟ ತೀವ್ರಗೊಳಿಸಲಾಗುವುದು’ ಎಂದರು. ಸಂಘಟನೆಯ ರಾಜ್ಯ ಸಂಚಾಲಕಿ ರಂಜಿತಾ ರವೀಂದ್ರ ಉಪಸ್ಥಿತರಿದ್ದರು.
ಪ್ರಮುಖರಾದ ಪಾಡುರಂಗ ನಾಯ್ಕ ಬೆಳೆಕೆ, ಸದಾನಂದ ತಿಗಡಿ, ರಮಾನಂದ ನಾಯ್ಕ, ಮಾಬ್ಲೇಶ್ವರ್ ನಾಯ್ಕ ಬೇಡ್ಕಣಿ, ಆನಂದ ನಾಯ್ಕ, ರಾಘವೇಂದ್ರ ಕವಂಚೂರು ಮಾತನಾಡಿದ್ದರು. ವೇದಿಕೆಯ ಮೇಲೆ ರಾಜು ನರೇಬೈಲ್, ದೇವರಾಜ ಗೊಂಡ ಭಟ್ಕಳ, ಇಬ್ರಾಹಿಂ ಗೌಡಳ್ಳಿ, ಭೀಮಶಿ ವಾಲ್ಮಿಕಿ, ನೇಹರು ನಾಯ್ಕ, ಎಮ್ ಆರ್ ನಾಯ್ಕ, ಮಹೇಂದ್ರ ನಾಯ್ಕ ಕತಗಾಲ, ಯಾಕೂಬ ಬೆಟ್ಕುಳಿ ಇದ್ದರು.

Previous Post

ಬೇಡ್ತಿ ದಾರಿಯಲ್ಲಿ ನಿಯಂತ್ರಣ ತಪ್ಪಿದ ಬಸ್ಸು: ಕಾರು ಜಖಂ

Next Post

ಮಹಿಳಾ ಅಧಿಕಾರಿಗೆ ವಿಚಿತ್ರ ಶಿಕ್ಷೆ: ದಿನವಿಡಿ ಕಾದರೂ ಸಿಗಲಿಲ್ಲ ಅಧಿಕಾರ ಖುರ್ಚಿ!

Next Post

ಮಹಿಳಾ ಅಧಿಕಾರಿಗೆ ವಿಚಿತ್ರ ಶಿಕ್ಷೆ: ದಿನವಿಡಿ ಕಾದರೂ ಸಿಗಲಿಲ್ಲ ಅಧಿಕಾರ ಖುರ್ಚಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ