6
  • Latest

ಉತ್ತರ ಕನ್ನಡದಲ್ಲಿ ಸಿರಿಗನ್ನಡ ಯಾತ್ರೆ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉತ್ತರ ಕನ್ನಡದಲ್ಲಿ ಸಿರಿಗನ್ನಡ ಯಾತ್ರೆ

AchyutKumar by AchyutKumar
in ರಾಜ್ಯ

87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ ಸಹಕಾರದಲ್ಲಿ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯ ಉದ್ಘಾಟಣೆಯು ಸೆ.22 ರಂದು ಬೆಳಗ್ಗೆ 11 ಗಂಟೆಗೆ ಸಿದ್ದಾಪುರ ತಾಲೂಕಿನ ಭುವನಗಿರಿಯ ಶ್ರೀ ಭುವನೇಶ್ವರಿ ದೇವಿ ದೇವಾಲಾಯದಲ್ಲಿ ನಡೆಯಲಿದೆ.

ADVERTISEMENT

ಕನ್ನಡ ಜ್ಯೋತಿ ರಥಯಾತ್ರೆಯು ಕರ್ನಾಟಕ ರಾಜ್ಯದಾದ್ಯಂತ ಸಂಚರಿಸಲಿದ್ದು, ಸೆ,22 ರಿಂದ ಸೆ.25 ರವರೆಗೆ ಉತ್ತರ ಕನ್ನಡ
ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್
ಸಹಕಾರದಲ್ಲಿ ಸಂಚರಿಸಲಿದೆ. ಸೆ.22 ರಂದು ಬೆಳಗ್ಗೆ 11 ಗಂಟೆಗೆ ಸಿದ್ದಾಪುರ ತಾಲೂಕಿನ ಆಗಮಿಸಲಿದ್ದು, ತಾಲೂಕಿನಲ್ಲಿ ಸಂಚರಿಸಲಿದೆ, ನಂತರ ಮಧ್ಯಾಹ್ನ 2 ಗಂಟೆಗೆ ಹೊನ್ನಾವರ ತಾಲೂಕಿನಲ್ಲಿ ಸ್ವಾಗತ, ಹಾರ ಸಮರ್ಪಣೆ, ರಥ ಸಂಚಾರ ನಡೆಯಲಿದೆ. ಸೆಂಜೆ 4.30 ಗಂಟೆಗೆ ಕುಮಟಾ ತಾಲೂಕಿಗೆ ಆಗಮಿಸಿ ತಾಲೂಕಿನಲ್ಲಿ ಸಂಚರಿಸಲಿದೆ.

ಸೆ.23 ರಂದು ಬೆಳಗ್ಗೆ 10 ಗಂಟೆಗೆ ಅಂಕೋಲಾ ತಾಲೂಕಿಗೆ ಆಗಮಿಸಿ ರಥ ಸಂಚರಸಲಿದೆ. ನಂತರ ಮಧ್ಯಾಹ್ನ 12.30 ಗಂಟೆಗೆ
ಜಿಲ್ಲಾ ಕೇಂದ್ರವಾದ ಕಾರವಾರ ನಗರಕ್ಕೆ ಆಗಮಿಸಲಿದ್ದು, ಸ್ವಾಗತ, ಹಾರ ಸಮರ್ಪಣೆ, ರಥ ಸಂಚಾರ ನಡೆಯಲಿದೆ. ನಂತರ ಮಧ್ಯಾಹ್ನ 3 ಗಂಟೆಗೆ ಗೋವಾದ ಕಾಣಕೋಣಗೆ ಆಗಮಿಸುವ ಕನ್ನಡ ರಥಯಾತ್ರೆಗೆ ಸ್ವಾಗತ, ಹಾರ ಸಮರ್ಪಣೆ, ರಥ ಸಂಚಾರ ನಡೆಯಲಿದೆ. ನಂತರ ಕಾಣಕೋಣದಿಂದ ಸಂಜೆ 6.30 ಗಂಟೆಗೆ ಜೋಯಿಡಾ ತಾಲೂಕಿಗೆ ಆಗಮಿಸುವ ರಥಕ್ಕೆ ಸ್ವಾಗತ, ಹಾರ ಸಮರ್ಪಣೆ, ರಥ ಸಂಚಾರ ನಡೆಯಲಿದೆ.

Advertisement. Scroll to continue reading.

ಸೆ.24 ರಂದು ಬೆಳಗ್ಗೆ 10 ಗಂಟೆಗೆ ದಾಂಡೇಲಿಗೆ ಆಗಮಿಸುವ ಕನ್ನಡ ರಥಯಾತ್ರೆ ದಾಂಡೇಲಿಯಲ್ಲಿ ಸಂಚರಿಸಿ, ಮಧ್ಯಾಹ್ನ 2
ಗಂಟೆಗೆ ಹಳಿಯಾಳ ತಾಲೂಕಿಗೆ ಆಗಮಿಸಿಲಿದ್ದು ತಾಲೂಕಿನಲ್ಲಿ ಸ್ವಾಗತ ಹಾರ ಸಮರ್ಪಣೆ, ರಥ ಸಂಚಾರ ನಡೆಯಲಿದೆ.
ಸೆ.25 ರಂದು ಬೆಳಗ್ಗೆ 10 ಗಂಟೆಗೆ ಯಲ್ಲಾಪುರ ತಾಲೂಕಿಗೆ ಆಗಮಿಸುವ ಕನ್ನಡ ರಥಯಾತ್ರೆ ತಾಲೂಕಿನಲ್ಲಿ ಸಂಚರಿಸಿ
ಮಧ್ಯಾಹ್ನ 12 ಗಂಟೆಗೆ ಶಿರಸಿ ತಾಲೂಕಿಗೆ ಆಗಮಿಸುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಗೆ ಸ್ವಾಗತ, ಹಾರ ಸಮರ್ಪಣೆ ರಥ ಸಂಚಾರದ ನಂತರ ಬೀಳ್ಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ, ಲಷ್ಮೀಪ್ರಿಯಾ ತಿಳಿಸಿದ್ದಾರೆ.

Advertisement. Scroll to continue reading.

ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಪ್ರವಾಸ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಸೆ.21ರಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಸಿದ್ದಾಪುರದಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತದ ಅಧಿಕಾರಿಗಳು, ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ 87 ನೇ
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥದ ಚಾಲನೆ ಪೂರ್ವ ಸಿದ್ದತೆಗಾಗಿ ಸಮಾಲೋಚನಾ ಸಭೆಯಲ್ಲಿ ಭಾಗವಹಿಸುವರು.

ಸೆ.22 ರಂದು ಬೆಳಗ್ಗೆ 11 ಗಂಟೆಗೆ ಸಿದ್ದಾಪುರ ತಾಲೂಕಿನ ಭುವನಗಿರಿಯ ಶ್ರೀ ಭುವನೇಶ್ವರಿ ದೇವಿ ದೇವಲಾಯದಲ್ಲಿ ಉತ್ತರ
ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು, ಸಂಸದರು, ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳೊಗೂಡಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಕ್ಕೆ ಚಾಲನೆ ನೀಡಲಿದ್ದಾರೆ ಎಂದು ಅವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Previous Post

ಸ್ವರ್ಣವಲ್ಲಿಯಲ್ಲಿ ನಡೆದ ಭಕ್ತಿ ಸಂಗೀತ

Next Post

ಕಾನ್ಸರ್ ಪೀಡಿತರಿಗೆ ಸಹಕಾರಿ ನೆರವು: ಮಾತೃ ಹೃದಯ ಮೆರೆದ ಶ್ರೀಮಾತಾ

Next Post

ಕಾನ್ಸರ್ ಪೀಡಿತರಿಗೆ ಸಹಕಾರಿ ನೆರವು: ಮಾತೃ ಹೃದಯ ಮೆರೆದ ಶ್ರೀಮಾತಾ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ