`ವಿವಿಧ ಕಚೇರಿಗಳಲ್ಲಿ 10 ವರ್ಷಗಳಿಂದ ಬೀಡು ಬಿಟ್ಟಿರುವ ಸರ್ಕಾರಿ ನೌಕರರನ್ನು ಕೂಡಲೇ ವರ್ಗಾಯಿಸಬೇಕು’ ಎಂದು ಆಗ್ರಹಿಸಿ ಭಟ್ಕಳದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರಿಗೆ ತಾಲೂಕು ಆಡಳಿತ ನೋಟಿಸ್ ನೀಡಿದೆ.
ಇಲ್ಲಿನ ಹಳೆ ತಹಶೀಲ್ದಾರ್ ಕಚೇರಿ ಎದುರು ರಾಜ್ಯ ಮಾಹಿತಿ ಹಕ್ಕು ಕಾಯ್ದೆ ಪದಾಧಿಕಾರಿಗಳು ಧರಣಿ ನಡೆಸುತ್ತಿದ್ದರು. ಶುಕ್ರವಾರ ರಾತ್ರಿಯಿಡಿ ಪ್ರತಿಭಟನಾಕಾರರು ಕಚೇರಿ ಮುಂದೆ ಕೂತಿದ್ದು, ಶನಿವಾರ ಅವರಿಗೆ ತಾಲೂಕು ಆಡಳಿತ ನೋಟಿಸ್ ಜಾರಿ ಮಾಡಿದೆ. `ಭಟ್ಕಳ ಅತಿ ಸೂಕ್ಷö್ಮ ಪ್ರದೇಶವಾಗಿದ್ದು ಕಾನೂನು ಸುವ್ಯವಸ್ಥೆ ಕಾರಣದಿಂದ ಪ್ರತಿಭಟನೆ ಮುಕ್ತಾಯಗೊಳಿಸಬೇಕು’ ಎಂದು ನೋಟಿಸ್ಸಿನಲ್ಲಿ ಸೂಚಿಸಲಾಗಿದೆ.
ಪ್ರತಿಭಟನೆ ನೇತ್ರತ್ವವಹಿಸಿದ್ದ ಶಂಕರ್ ಅವರಿಗೆ ಕಂದಾಯ ನಿರೀಕ್ಷಕ ವಿಶ್ವನಾಥ್ ನೋಟಿಸ್ ನೀಡಲು ಆಗಮಿಸಿದ್ದರು. ಆದರೆ, ಪ್ರತಿಭಟನಾಕಾರರು ನೋಟಿಸ್ ಸ್ವೀಕರಿಸಲಿಲ್ಲ. ಹೀಗಾಗಿ ಅಲ್ಲಿದ್ದ ಗೋಡೆಗೆ ಅಧಿಕಾರಿಗಳು ನೋಟಿಸ್ ಅಂಟಿಸಿದರು. `ಭಟ್ಕಳದ ಸಹಾಯಕ ಕಮಿಷನರ್ ಕಚೇರಿ ಹಾಗೂ ತಹಶೀಲ್ದಾರ ಕಚೇರಿಯಲ್ಲಿ ಹಲವು ವರ್ಷಗಳಿಂದ ಅಧಿಕಾರಿಗಳು ಬದಲಾಗಿಲ್ಲ. ಅಂಥವರಿoದ ಆಡಳಿತ ಹದಗೆಟ್ಟಿದೆ’ ಎಂದು ದೂರಿ ಪ್ರತಿಭಟನೆ ನಡೆಯುತ್ತಿದೆ.




