ಶಿರಸಿ: ಟಿಎಸ್ಎಸ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾಗಿದ್ದ ರಾಮಕೃಷ್ಣ ಹೆಗಡೆ ಕಡವೆ ಆ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಮಂಗಳವಾರ ಟಿಎಸ್ಎಸ್ ಸಂಸ್ಥೆಯ ಪ್ರಭಾರಿ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳಿಗೆ ಅವರು ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. ರಾಜೀನಾಮೆ ಪತ್ರದಲ್ಲಿ ಹಾಲಿ ಆಡಳಿತ ಮಂಡಳಿ ವಿರುದ್ಧ ಹಲವು ಆರೋಪಗಳನ್ನು ಅವರು ಮಾಡಿದ್ದು, ಮುಖ್ಯವಾಗಿ ತಮ್ಮ ವೈಯಕ್ತಿಕ ಮಾಹಿತಿ ಬೇರೆಯವರ ಪಾಲಾದ ಬಗ್ಗೆ ದೂರಿದ್ದಾರೆ.
`ತನ್ನನ್ನು ಗುರಿಯಾಗಿರಿಸಿಕೊಂಡು ನಿರಂತರ ದಾಳಿ ನಡೆಸಲಾಗುತ್ತಿದ್ದು, ಸಂಸ್ಥೆಯ ಸಭೆಯಲ್ಲಿನ ಠರಾವು ಪ್ರತಿಗಳನ್ನು ಸಹ ನೀಡುತ್ತಿಲ್ಲ. ಈ ಎಲ್ಲಾ ಕಾರಣದಿಂದ ಮನನೊಂದು ಟಿಎಸ್ಎಸ್ ಸಂಸ್ಥೆಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವೆ’ ಎಂದವರು ಹೇಳಿದ್ದಾರೆ.




