6
  • Latest

ಶಿರೂರು | ಹೋರಾಟಗಾರರ ಮೇಲೆ ಪೊಲೀಸ್ ಅಸ್ತ್ರ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರೂರು | ಹೋರಾಟಗಾರರ ಮೇಲೆ ಪೊಲೀಸ್ ಅಸ್ತ್ರ!

AchyutKumar by AchyutKumar
in ಸ್ಥಳೀಯ

ಶಿರೂರು ಮಣ್ಣು ಕುಸಿತ ದುರಂತದಲ್ಲಿ ಸಾವನಪ್ಪಿದವರ ಕುಟುಂಬಕ್ಕೆ ಕೋಟಿ ರೂ ಪರಿಹಾರ ಒದಗಿಸಬೇಕು ಎಂದು ಹೋರಾಟ ನಡೆಸಿದ 8 ಜನರ ಮೇಲೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಅನುಮತಿ ಪಡೆಯದೇ ಹೋರಾಟ ನಡೆಸಿರುವುದೇ ಇದಕ್ಕೆ ಮುಖ್ಯ ಕಾರಣ. `ಪೊಲೀಸರ ಈ ವರ್ತನೆ ವಿರುದ್ಧ ಜನಾಂದೋಲನ ನಡೆಯಬೇಕು’ ಎಂದು ಪ್ರತಿಭಟನೆಯಲ್ಲಿ ಭಾಗಿಯಾಗಿ ಅಲೆದಾಟ ನಡೆಸುತ್ತಿರುವವರಲ್ಲಿ ಒಬ್ಬರಾದ ನಾಗೇಶ ನಾಯ್ಕ ಕಗಾಲ ಸುದ್ದಿಗಾರರಲ್ಲಿ ಹೇಳಿದರು.

ADVERTISEMENT

ಊಹಾಪೋಹಗಳ ಸುದ್ದಿ!
`ಶಿರೂರು ಗುಡ್ಡ ಕುಸಿತಕ್ಕೆ ಐಆರ್‌ಬಿ ಕಂಪನಿ ಕಾರಣ. ಈ ಕಂಪನಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಆಪ್ತರ ಒಡೆತನದ್ದು ಎಂಬ ಮಾಹಿತಿಯಿದೆ. ಶಿರೂರು ದುರಂತ ಕಾರ್ಯಚರಣೆಗೆ 15 ಕೋಟಿ ರೂ ವೆಚ್ಚ ಮಾಡಿರುವ ಬಗ್ಗೆಯೂ ಹೇಳಲಾಗಿದ್ದು, ಇದ್ಯಾವುದು ಖಚಿತವಾಗಿಲ್ಲ. ಆದರೆ, ಆ ಹಣದ ಪೈಕಿ ಅಲ್ಪವನ್ನಾದರೂ ಸಂತ್ರಸ್ತರಿಗೆ ಕೊಡಬಹುದಾಗಿತ್ತು. ಈ ನಿಟ್ಟಿನಲ್ಲಿ ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟ ಹೊನ್ನಾವರದಲ್ಲಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆ ನಡೆಸುವ ಬಗ್ಗೆ ಪೊಲೀಸ್ ಅನುಮತಿಗೆ ಪತ್ರ ನೀಡಿದ್ದರೂ ಹಿಂಬರಹ ಬಂದಿರಲಿಲ್ಲ. ಅದಾಗಿಯೂ ಪ್ರಕರಣ ದಾಖಲಿಸಿದ್ದಾರೆ’ ಎಂದು ದೂರಿದರು. `ತನ್ನ ವಿರುದ್ಧ ದಾಖಲಾದ ಪ್ರಕರಣದ ಪ್ರತಿ ಈವರೆಗೂ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ್ದೇನೆ’ ಎಂದು ಸ್ಪಷ್ಠಪಡಿಸಿದರು.

ಭದ್ರತೆ ಒದಗಿಸಿದವರಿಂದಲೇ ದೂರು!
ಸೆ 12ರಂದು ಜನಪರ ಒಕ್ಕೂಟದವರು ಸೇರಿ ವಿವಿಧ ಸಂಘಟನೆಯವರು ಹೊನ್ನಾವರದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸುವ ವೇಳೆ ಪೊಲೀಸರು ಭದ್ರತೆ ಒದಗಿಸಿದ್ದರು. ಆ ವೇಳೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಬಗ್ಗೆ ಅವರೇ ತಿಳಿಸಿದ್ದು, ಸಂಚರಿಸುವ ವಾಹನಗಳಿಗೆ ತೊಂದರೆ ಆಗದಂತೆಯೂ ನೋಡಿಕೊಂಡಿದ್ದರು. ಆದರೆ, ಇದೀಗ ತಮ್ಮ ಶಾಂತಿಯುತ ಪ್ರತಿಭಟನೆ ನಡೆಸಿದರೂ 8 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜಿಲ್ಲಾ ಜನಪರ ಒಕ್ಕೂಟ ಇದನ್ನು ಖಂಡಿಸುತ್ತದೆ’ ಎಂದು ನಾಗೇಶ ನಾಯ್ಕ ಕಗಾಲ ಹೇಳಿದರು.

Advertisement. Scroll to continue reading.

ಪ್ರಮುಖರಾದ ನರಸಿಂಹ ನಾಯ್ಕ, ರಾಘವೇಂದ್ರ ನಾಯ್ಕ, ಬೆನಿತ್ ಸಿದ್ದಿ, ಅಮಿತ್ ನಾಯ್ಕ, ಜಾನ್ ಸಿದ್ದಿ ಅವರ ಹೇಳಿಕೆಯನ್ನು ಬೆಂಬಲಿಸಿದರು.

Advertisement. Scroll to continue reading.
Previous Post

ರಾಜ್ಯದಲ್ಲಿ ಕೋಟಿ ಕೋಟಿ ಲೆಕ್ಕಾಚಾರದ ಹಗರಣ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಬಿಜೆಪಿ ವಕ್ತಾರ

Next Post

ಆಸ್ಪತ್ರೆಯಲ್ಲಿ ಲೋಪ: ಸಾರ್ವಜನಿಕ ದೂರಿಗೆ ಸ್ಪಂದಿಸಿದ ಶಾಸಕ

Next Post

ಆಸ್ಪತ್ರೆಯಲ್ಲಿ ಲೋಪ: ಸಾರ್ವಜನಿಕ ದೂರಿಗೆ ಸ್ಪಂದಿಸಿದ ಶಾಸಕ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ