6
  • Latest

ಚಾಕಲೇಟ್ ಆಸೆ ತೋರಿಸಿ ಅತ್ಯಾಚಾರ: ಕಾಡಿನ ಕ್ರೂರಿಗೆ ಕಠಿಣ ಶಿಕ್ಷೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಚಾಕಲೇಟ್ ಆಸೆ ತೋರಿಸಿ ಅತ್ಯಾಚಾರ: ಕಾಡಿನ ಕ್ರೂರಿಗೆ ಕಠಿಣ ಶಿಕ್ಷೆ

AchyutKumar by AchyutKumar
in ವಿಡಿಯೋ

ಶಿರಸಿ: ಅತ್ಯಾಚಾರಕ್ಕೆ ಒಳಗಾಗಿದ್ದ ಬುದ್ದಿಮಾಂದ್ಯ ಯುವತಿಗೆ ನ್ಯಾಯ ಕೊಡಿಸಲು ಹೋರಾಡಿದ ನ್ಯಾಯವಾದಿ ರಾಜೇಶ್ ಎಂ ಮಳಗಿಕರ್ ಕೊನೆಗೂ ಅತ್ಯಾಚಾರಿಗೆ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವಂತೆ ವಾದ ಮಂಡಿಸಿದರು.

ADVERTISEMENT

ಅತ್ಯಾಚಾರಿ ವೀರಭದ್ರ ತಿಮ್ಮ ನಾಯ್ಕ (55) ವರ್ತನೆಯ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟ ಅವರು ಕ್ರೂರ ವ್ಯಕ್ತಿತ್ವದ ಆಪಾದಿತನಿಗೆ ಕಠಿಣ ಶಿಕ್ಷೆ ಪ್ರಕಟಿಸುವಂತೆ ಮನವಿ ಮಾಡಿದರು. ಅದರ ಪ್ರಕಾರ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಿರಣ್ ಕಿಣಿ ಅವರು ಅತ್ಯಾಚಾರಿಗೆ 10 ವರ್ಷಗಳ ಜೈಲು, 30 ಸಾವಿರ ರೂ ದಂಡ ಹಾಗೂ ಸಂತ್ರಸ್ತೆಗೆ 50 ಸಾವಿರ ರೂ ಪರಿಹಾರ ವಿಧಿಸಿ ತಮ್ಮ ತೀರ್ಪು ಪ್ರಕಟಿಸಿದರು.

2020ರಲ್ಲಿ ವೀರಭದ್ರ ತಿಮ್ಮ ನಾಯ್ಕ ಬುದ್ದಿಮಾಂದ್ಯ ಯುವತಿಗೆ ಚಾಕಲೇಟ್ ಕೊಡಿಸುವುದಾಗಿ ನಂಬಿಸಿ ಕಾಡಿಗೆ ಕರೆದೊಯ್ದಿದ್ದ. ಅಲ್ಲಿ ಆಕೆಯ ಮೇಲೆ ಅಮಾನುಷವಾಗಿ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖಾಧಿಕಾರಿ ಮಹೇಶ್ ಎಂಬಾತರು ವಿವಿಧ ಬಗೆಯಲ್ಲಿ ಸಾಕ್ಷಿಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ವಾದ-ವಿವಾದವನ್ನು ಆಲಿಸಿ, ಆದೇಶ ಹೊರಡಿಸಿದೆ.

Advertisement. Scroll to continue reading.

ಲಭ್ಯವಿರುವ ಸಾಕ್ಷಿಗಳ ಆಧಾರಗಳನ್ನು ಮುಂದಿರಿಸಿಕೊoಡು ಸರ್ಕಾರಿ ನ್ಯಾಯವಾದಿ ರಾಜೇಶ್ ಎಂ ಮಳಗಿಕರ್ ಸಾಕಷ್ಟು ವಾದ ಮಾಡಿದರು. ಆರೋಪಿಯ ಹಿನ್ನಲೆ ಹಾಗೂ ಲಭ್ಯವಿರುವ ದಾಖಲೆಗಳನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಕಿರಣ್ ಕಿಣಿ ಅವರು ವೀರಭದ್ರ ತಿಮ್ಮ ನಾಯ್ಕ ತಪ್ಪಿತಸ್ಥ ಎಂದು ರುಜು ಮಾಡಿದ್ದು, ಅಂತಿಮವಾಗಿ ಆತನಿಗೆ 10 ವರ್ಷಗಳ ಕಾಲದ ಕಠಿಣ ಕಾರಾಗೃಹ ಶಿಕ್ಷೆಯನ್ನು ನೀಡಿದರು. ಜೊತೆಗೆ 30 ಸಾವಿರ ರೂ ದಂಡವನ್ನು ಪಾವತಿಸುವಂತೆ ಆದೇಶಿಸಿದರು. ಅನ್ಯಾಯಕ್ಕೆ ಒಳಗಾದ ಸಂತ್ರಸ್ತೆಗೆ 50 ಸಾವಿರ ರೂ ಪರಿಹಾರವನ್ನು ಆಪಾಧಿತ ನೀಡಬೇಕು ಎಂದು ತಮ್ಮ ನ್ಯಾಯವನ್ನು ಪ್ರಕಟಿಸಿದರು.

Advertisement. Scroll to continue reading.

ಸಂತ್ರಸ್ತೆ ಪರ ವಾದ ಮಾಡಿದ ನ್ಯಾಯವಾದಿ ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ…

Previous Post

ಅರಣ್ಯ ಹೋರಾಟಗಾರರಿಗೆ ಗ್ರೀನ್ ಕಾರ್ಡ: ರಾಜಧಾನಿ ಪಯಣಕ್ಕೆ ಈಗಲೇ ಟಿಕೆಟ್ ಕಾಯ್ದಿರಿಸಿ!

Next Post

ಬಿಜೆಪಿ ಕಿರಿಕಿರಿಗೆ ಮುಖ್ಯಮಂತ್ರಿ ಪತ್ನಿ ಸುಸ್ತು: ಪದೇ ಪದೇ ಕಾಡಿಸದಂತೆ ಮನವಿ ಮಾಡಿದ ಸಚಿವ!

Next Post

ಬಿಜೆಪಿ ಕಿರಿಕಿರಿಗೆ ಮುಖ್ಯಮಂತ್ರಿ ಪತ್ನಿ ಸುಸ್ತು: ಪದೇ ಪದೇ ಕಾಡಿಸದಂತೆ ಮನವಿ ಮಾಡಿದ ಸಚಿವ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ