6
  • Latest

ನವೆಂಬರ್ 1ರಿಂದ ಸಾಂಸ್ಕೃತಿಕ ಕಲರವ: ಯಲ್ಲಾಪುರದಲ್ಲಿ ಸಂಕಲ್ಪ ಉತ್ಸವ.. ಸಂಸ್ಕೃತಿಯ ಸುಗ್ಗಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನವೆಂಬರ್ 1ರಿಂದ ಸಾಂಸ್ಕೃತಿಕ ಕಲರವ: ಯಲ್ಲಾಪುರದಲ್ಲಿ ಸಂಕಲ್ಪ ಉತ್ಸವ.. ಸಂಸ್ಕೃತಿಯ ಸುಗ್ಗಿ!

AchyutKumar by AchyutKumar
in ಸ್ಥಳೀಯ

ನವೆಂಬರ್ 1ರಿಂದ ನಾಲ್ಕು ದಿನಗಳ ಕಾಲ ಸಂಕಲ್ಪ ಉತ್ಸವ ನಡೆಯಲಿದೆ. ಸಂಕಲ್ಪ ಉತ್ಸವದ ಭಾಗವಾಗಿ ಡಿಸೆಂಬರ್ 2ನೇ ವಾರ ಯಲ್ಲಾಪುರದಲ್ಲಿ ನಾಟಕೋತ್ಸವವನ್ನು ಸಹ ಸಂಘಟಿಸಲಾಗಿದೆ. ಸೆ 4ರಂದು ಸಂಕಲ್ಪ ಉತ್ಸವದಲ್ಲಿ ಚಿಗುರು ತಂಡದಿoದ ನಡೆಯುವ ಕಾರ್ಯಕ್ರಮಗಳು ಈ ಬಾರಿ ಉತ್ಸವದ ವಿಶೇಷಗಳಲ್ಲಿ ಒಂದು. ಪ್ರತಿ ದಿನ ಸಭಾ ಕಾರ್ಯಕ್ರಮಕ್ಕೂ ಮುನ್ನ ಗೀತಾ ಪಾರಾಯಣ ಪಠಣವೂ ಇರಲಿದೆ.

ADVERTISEMENT

ಯಲ್ಲಾಪುರ: 37 ವರ್ಷಗಳಿಂದ ಯಲ್ಲಾಪುರದಲ್ಲಿ ಯಕ್ಷಗಾನ ಸಂಘಟಿಸುತ್ತ ಬಂದಿರುವ ಸಾಂಸ್ಕೃತಿಕ ರಾಯಬಾರಿ ಪ್ರಮೋದ ಹೆಗಡೆ 38ನೇ ವರ್ಷದ ಸಂಕಲ್ಪ ಉತ್ಸವಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ಪ್ರಮೋದ ಹೆಗಡೆ ಅವರ ಪುತ್ರರಾದ ಪ್ರಸಾದ ಹೆಗಡೆ ಹಾಗೂ ಪ್ರಶಾಂತ ಹೆಗಡೆ ಮುಂದಾಳತ್ವದಲ್ಲಿ ನಾಲ್ಕು ದಿನಗಳ ಕಾಲ ಈ ಉತ್ಸವ ನಡೆಯಲಿದೆ.

ನವೆಂಬರ್ 1ರಿಂದ 4ರವರೆಗೆ ಪ್ರತಿ ದಿನ ಸಂಜೆ 4.30ರಿಂದ ಸಂಕಲ್ಪ ಉತ್ಸವದ ಕಾರ್ಯಕ್ರಮಗಳು ಶುರುವಾಗಲಿದೆ. ಯಕ್ಷಗಾನ ಪ್ರದರ್ಶನದ ಜೊತೆ ಇನ್ನೂ ಅನೇಕ ಸಾಂಸ್ಕೃತಿಕ ಚಟುವಟಿಕೆಗಳಿಗೆ ಈ ವೇದಿಕೆ ಸಾಕ್ಷಿಯಾಗಲಿದೆ. `ನ. 1ರ ಸಂಜೆ ಸ್ವರ್ಣವಲ್ಲೀ ಶ್ರೀಗಳು ಉತ್ಸವ ಉದ್ಘಾಟಿಸಲಿದ್ದಾರೆ. ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳ 15 ಜನರಿಗೆ ಈ ಬಾರಿ ಸಂಕಲ್ಪ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ’ ಎಂದು ಪ್ರಮೋದ ಹೆಗಡೆ ಸುದ್ದಿಗಾರರಿಗೆ ತಿಳಿಸಿದರು. `ಯುನಸ್ಕೋ ಮಾನ್ಯತೆ ಕೆರೆಮನೆ ಮೇಳದ ಮೂಲಕ ಯಕ್ಷಗಾನಕ್ಕೆ ದೊರೆತಿರುವುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಕ್ಷಗಾನ ಗುರುತಿಸಿಕೊಳ್ಳುವಂತೆ ಮಾಡಿದೆ’ ಎಂದವರು ಈ ವೇಳೆ ಸಂತಸ ಹಂಚಿಕೊoಡರು.

Advertisement. Scroll to continue reading.

ಸಂಕಲ್ಪ ಸಂಸ್ಥೆಯ ಸಂಚಾಲಕ ಪ್ರಸಾದ ಹೆಗಡೆ ಮಾತನಾಡಿ `ಸಂಕಲ್ಪ ಉತ್ಸವದ ನಾಲ್ಕು ದಿನಗಳ ಕಾಲ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ, ತಾಳಮದ್ದಲೆ, ಭಜನೆ, ಭಕ್ತಿ ಸಂಗೀತ, ನೃತ್ಯ ರೂಪಕ, ಕೀರ್ತನೆ, ಭರತನಾಟ್ಯ ನಡೆಯಲಿದೆ. ನ 4ರಂದು ಆಯುರ್ವೇದ ಚಿಕಿತ್ಸಾ ಶಿಬಿರ ನಡೆಯಲಿದೆ’ ಎಂದು ಮಾಹಿತಿ ನೀಡಿದರು. ಅರ್ಥಧಾರಿ ಎಂ.ಎನ್.ಹೆಗಡೆ ಮಾತನಾಡಿ `ಸಂಕಲ್ಪ ಉತ್ಸವ ಜನರ ಉತ್ಸವವಾಗಿ ಮುನ್ನಡೆಯುತ್ತಿದೆ. ಪ್ರತಿ ವರ್ಷ ಉತ್ಸವಕ್ಕಾಗಿ ಜನರು ಕಾಯುತ್ತಿದ್ದಾರೆ’ ಎಂದರು.

Advertisement. Scroll to continue reading.

ಸoಸ್ಥೆಯ ಪ್ರಮುಖರಾದ ಪ್ರಶಾಂತ ಹೆಗಡೆ, ರವಿ ಭಟ್ಟ ಬಿಡಾರ, ಗೋಪಣ್ಣ ತಾರೀಮಕ್ಕಿ, ನಾರಾಯಣ ಭಟ್ಟ, ಲೋಕನಾಥ ಗಾಂವ್ಕರ, ಪ್ರದೀಪ ಯಲ್ಲಾಪುರಕರ್ ಉಪಸ್ಥಿತರಿದ್ದರು.

Previous Post

ಶಿವ ಸನ್ನಿಧಿಯಲ್ಲಿ ಸಾಹಸ ಪ್ರವಾಸೋದ್ಯಮ: ಸುರಕ್ಷಿತ ಜಲಕ್ರೀಡೆಗೆ ಸಜ್ಜಾದ ಮುರುಡೇಶ್ವರ!

Next Post

ಮಹಿಳಾ ಪ್ರಯಾಣಿಕರೇ ಕಳ್ಳರ ಟಾರ್ಗೇಟು!

Next Post

ಮಹಿಳಾ ಪ್ರಯಾಣಿಕರೇ ಕಳ್ಳರ ಟಾರ್ಗೇಟು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ