6
  • Latest

ನವೆಂಬರ್ 1ರಿಂದ ಸಾಂಸ್ಕೃತಿಕ ಕಲರವ: ಯಲ್ಲಾಪುರದಲ್ಲಿ ಸಂಕಲ್ಪ ಉತ್ಸವ.. ಸಂಸ್ಕೃತಿಯ ಸುಗ್ಗಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನವೆಂಬರ್ 1ರಿಂದ ಸಾಂಸ್ಕೃತಿಕ ಕಲರವ: ಯಲ್ಲಾಪುರದಲ್ಲಿ ಸಂಕಲ್ಪ ಉತ್ಸವ.. ಸಂಸ್ಕೃತಿಯ ಸುಗ್ಗಿ!

AchyutKumar by AchyutKumar
in ಸ್ಥಳೀಯ

ನವೆಂಬರ್ 1ರಿಂದ ನಾಲ್ಕು ದಿನಗಳ ಕಾಲ ಸಂಕಲ್ಪ ಉತ್ಸವ ನಡೆಯಲಿದೆ. ಸಂಕಲ್ಪ ಉತ್ಸವದ ಭಾಗವಾಗಿ ಡಿಸೆಂಬರ್ 2ನೇ ವಾರ ಯಲ್ಲಾಪುರದಲ್ಲಿ ನಾಟಕೋತ್ಸವವನ್ನು ಸಹ ಸಂಘಟಿಸಲಾಗಿದೆ. ಸೆ 4ರಂದು ಸಂಕಲ್ಪ ಉತ್ಸವದಲ್ಲಿ ಚಿಗುರು ತಂಡದಿoದ ನಡೆಯುವ ಕಾರ್ಯಕ್ರಮಗಳು ಈ ಬಾರಿ ಉತ್ಸವದ ವಿಶೇಷಗಳಲ್ಲಿ ಒಂದು. ಪ್ರತಿ ದಿನ ಸಭಾ ಕಾರ್ಯಕ್ರಮಕ್ಕೂ ಮುನ್ನ ಗೀತಾ ಪಾರಾಯಣ ಪಠಣವೂ ಇರಲಿದೆ.

ಯಲ್ಲಾಪುರ: 37 ವರ್ಷಗಳಿಂದ ಯಲ್ಲಾಪುರದಲ್ಲಿ ಯಕ್ಷಗಾನ ಸಂಘಟಿಸುತ್ತ ಬಂದಿರುವ ಸಾಂಸ್ಕೃತಿಕ ರಾಯಬಾರಿ ಪ್ರಮೋದ ಹೆಗಡೆ 38ನೇ ವರ್ಷದ ಸಂಕಲ್ಪ ಉತ್ಸವಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ಪ್ರಮೋದ ಹೆಗಡೆ ಅವರ ಪುತ್ರರಾದ ಪ್ರಸಾದ ಹೆಗಡೆ ಹಾಗೂ ಪ್ರಶಾಂತ ಹೆಗಡೆ ಮುಂದಾಳತ್ವದಲ್ಲಿ ನಾಲ್ಕು ದಿನಗಳ ಕಾಲ ಈ ಉತ್ಸವ ನಡೆಯಲಿದೆ.

ನವೆಂಬರ್ 1ರಿಂದ 4ರವರೆಗೆ ಪ್ರತಿ ದಿನ ಸಂಜೆ 4.30ರಿಂದ ಸಂಕಲ್ಪ ಉತ್ಸವದ ಕಾರ್ಯಕ್ರಮಗಳು ಶುರುವಾಗಲಿದೆ. ಯಕ್ಷಗಾನ ಪ್ರದರ್ಶನದ ಜೊತೆ ಇನ್ನೂ ಅನೇಕ ಸಾಂಸ್ಕೃತಿಕ ಚಟುವಟಿಕೆಗಳಿಗೆ ಈ ವೇದಿಕೆ ಸಾಕ್ಷಿಯಾಗಲಿದೆ. `ನ. 1ರ ಸಂಜೆ ಸ್ವರ್ಣವಲ್ಲೀ ಶ್ರೀಗಳು ಉತ್ಸವ ಉದ್ಘಾಟಿಸಲಿದ್ದಾರೆ. ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳ 15 ಜನರಿಗೆ ಈ ಬಾರಿ ಸಂಕಲ್ಪ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ’ ಎಂದು ಪ್ರಮೋದ ಹೆಗಡೆ ಸುದ್ದಿಗಾರರಿಗೆ ತಿಳಿಸಿದರು. `ಯುನಸ್ಕೋ ಮಾನ್ಯತೆ ಕೆರೆಮನೆ ಮೇಳದ ಮೂಲಕ ಯಕ್ಷಗಾನಕ್ಕೆ ದೊರೆತಿರುವುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಕ್ಷಗಾನ ಗುರುತಿಸಿಕೊಳ್ಳುವಂತೆ ಮಾಡಿದೆ’ ಎಂದವರು ಈ ವೇಳೆ ಸಂತಸ ಹಂಚಿಕೊoಡರು.

ಸಂಕಲ್ಪ ಸಂಸ್ಥೆಯ ಸಂಚಾಲಕ ಪ್ರಸಾದ ಹೆಗಡೆ ಮಾತನಾಡಿ `ಸಂಕಲ್ಪ ಉತ್ಸವದ ನಾಲ್ಕು ದಿನಗಳ ಕಾಲ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ, ತಾಳಮದ್ದಲೆ, ಭಜನೆ, ಭಕ್ತಿ ಸಂಗೀತ, ನೃತ್ಯ ರೂಪಕ, ಕೀರ್ತನೆ, ಭರತನಾಟ್ಯ ನಡೆಯಲಿದೆ. ನ 4ರಂದು ಆಯುರ್ವೇದ ಚಿಕಿತ್ಸಾ ಶಿಬಿರ ನಡೆಯಲಿದೆ’ ಎಂದು ಮಾಹಿತಿ ನೀಡಿದರು. ಅರ್ಥಧಾರಿ ಎಂ.ಎನ್.ಹೆಗಡೆ ಮಾತನಾಡಿ `ಸಂಕಲ್ಪ ಉತ್ಸವ ಜನರ ಉತ್ಸವವಾಗಿ ಮುನ್ನಡೆಯುತ್ತಿದೆ. ಪ್ರತಿ ವರ್ಷ ಉತ್ಸವಕ್ಕಾಗಿ ಜನರು ಕಾಯುತ್ತಿದ್ದಾರೆ’ ಎಂದರು.

ಸoಸ್ಥೆಯ ಪ್ರಮುಖರಾದ ಪ್ರಶಾಂತ ಹೆಗಡೆ, ರವಿ ಭಟ್ಟ ಬಿಡಾರ, ಗೋಪಣ್ಣ ತಾರೀಮಕ್ಕಿ, ನಾರಾಯಣ ಭಟ್ಟ, ಲೋಕನಾಥ ಗಾಂವ್ಕರ, ಪ್ರದೀಪ ಯಲ್ಲಾಪುರಕರ್ ಉಪಸ್ಥಿತರಿದ್ದರು.

ShareSendTweetShare
Previous Post

ಇದುವರೆಗಿನ ಪ್ರಾಯಕ್ಕೆ ಇದೀಗ ಬಿಡುಗಡೆಯ ಸಮಯ..

Next Post

ಮಹಿಳಾ ಪ್ರಯಾಣಿಕರೇ ಕಳ್ಳರ ಟಾರ್ಗೇಟು!

Next Post

ಮಹಿಳಾ ಪ್ರಯಾಣಿಕರೇ ಕಳ್ಳರ ಟಾರ್ಗೇಟು!

The secret of death in the deceased's purse The driver's body was returned to the lender

ಸತ್ತವನ ಪರ್ಸಿನಲ್ಲಿ ಸಾವಿನ ರಹಸ್ಯ: ಸಾಲ ಕೊಟ್ಟವರಿಗೆ ಮರಳಿ ಸಿಕ್ಕಿದ್ದು ಚಾಲಕನ ಶವ!

ನಾಯಕರು ಸಾಕಿದ ನಾಯಿ ನಾಪತ್ತೆ: ಹಂದಿಗೆ ಹಾಕಿದ ಗುರಿಗೆ ಮುದೋಳ ತಳಿ ಬಲಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.